Posts

Showing posts from April, 2008
ಮತ್ತೆ ಇತ್ತೀಚಿಗೆ ಆ ’ಬೆರಗು’ ಪುಸ್ತಕ ಮುಗಿಸಿದೆ . ನಿಜಕ್ಕೂ ಚೆನ್ನಾಗಿದೆ . ಒಮ್ಮೆ ಓದಲೆಬೇಕು . ’ಸೈನೈಡ್’ ಸಿನೆಮಾ ಉಳಿದ ಭಾಗ ನೋಡಿದೆ . ಸಂಯಮ ಭರಿತ ಸಿನೆಮಾ . ನಿಜವಾದ ಘಟನೆ ಆಧಾರಿತ ಎನ್ನೋದು ಬಿಟ್ರೆ ವಿಶೇಷ ಏನಿಲ್ಲ ; ಹೆಚ್ಚಿನ ಥ್ರಿಲ್ ಆಗಲಿ ಒಳನೋಟಗಳಾಗಲೀ ಇಲ್ಲ. ಆಮೇಲೆ ಈ ರವಿವಾರ ಗಾಳಿಗೋಪುರ ಮತ್ತು ನಾಂದಿ, ಕರುಣೆಯೇ ಕುಟುಂಬದ ಕಣ್ಣು ಎಂಬ ಮೂರು ಚಿತ್ರಗಳ ಒಂದು ಡೀವೀಡೀ ಬರೀ ೬೦ ರೂ. ಗೆ ತಂದಿದ್ದು ಗಾಳಿಗೋಪುರ ನೋಡಿದೆ . ಸಾಕಷ್ಟು ಉದ್ದದ ಸಿನೇಮಾ . ಇತ್ತೀಚೆಗೆ ಅನೇಕ ’ಸುಧಾ’ಗಳನ್ನು ಇನ್ನೊಮ್ಮೆ ನೋಡಿ , ಬೇಕಾದ ಹಾಳೆ ಹರಿದು ಇಟ್ಟುಕೊಂಡು ( ಬೇಡದ ಹಾಳೆಗಳನ್ನೂ ಹರಿಯಬೇಕಾಗುತ್ತದೆ ; ಆ ವಿಷಯ ಇನ್ನೊಮ್ಮೆ ಬರೆವೆ) ವಿಲೇವಾರಿ ಮಾಡಿದೆ. ಅದರಲ್ಲಿ ರಾವಣನ ಪುನರ್ಜನ್ಮದ ಕಣಸು ಎಂಬ ಧಾರಾವಾಹಿ ಬಂದಿತ್ತು .. ಎಷ್ಟೋ ರಾಮಾಯಣ, ಮಹಾಭಾರತ ಓದಿದ್ದೇನೆ ... ತಿಣುಕಿದನು ಫಣಿರಾಯ ರಾಮಾಯಣಗಳ ಭಾರದಲಿ ಅಂತ ಇದೆಯಲ್ಲ ... ಅವರ ದೃಷ್ಟಿಯಲ್ಲಿ , ಇವರ ಕಣ್ಣಿನಲ್ಲಿ ಇತ್ಯಾದಿ .. ಅದಕ್ಕೆ ಓದಿರಲಿಲ್ಲ . ಅದರಲ್ಲಿ ಇರುವದಾದರು ಏನು .. ನೋಡೋಣ, ರಾವಣನ ಪುನರ್ಜನ್ಮವೇ ? ಏನದು ? ಅವನ ಕಣಸು ಏನು ? ಅಂತ . ರಾವಣ ಸೋತು ಸಾಯುವ ಮೊದಲು ಆಸೆಪಡುತ್ತಾನೆ, ಸೀತೆ ಅವನನ್ನ ಅಪ್ಪಿಕೋಬೇಕು , ಅವನು ರಾಮನನ್ನು ಸೋಲಿಸಿ ಸೀತೆಯನ್ನು ಅವನಿಗೆ ಒಪ್ಪಿಸಬೆಕು . ಅಂತ .. ಈ ಬಯಕೆ ಈಡೇರೋದು ... ಮುಂದಿನ ಜನ್ಮದಲ್ಲಿ ... ರಾವಣ, ಕು
ನಿನ್ನೆ ಸಮಯ ಕಳೆದ ಪರಿ - ಪುಸ್ತಕ ಮತ್ತು ಸಿನೇಮಾ ನಿನ್ನೆ ದಿನ ರಜೆ ಇತ್ತು ; ಮೃತ್ಯುದಂಡ ಎಂಬ ಹಿಂದಿ ಸಿನೆಮಾವನ್ನು ಹದಿನೈದಾಣೆಯೂ , ಕನ್ನಡ ಸೈನೈಡ್ ಅನ್ನು ಅರ್ಧದಷ್ಟೂ , ಸರ್ವಕಾಲಸುಂದರಿ ಶರ್ಮಿಳಾ ಟಾಗೋರ್ ಳ ಸಿನೆಮಾ -ಆನ್ ಈವನಿಂಗ್ ಇನ್ ಪ್ಯಾರಿಸ್ - ಅರ್ಧದಷ್ಟೂ ನೋಡಿದೆ. ಡಾ.ಪ್ರಭುಶಂಕರ ಬರೆದ ಬಸವಣ್ಣನ ಕುರಿತಾದ ’ಬೆರಗು’ ಎಂಬ ಪುಸ್ತಕವನ್ನೂ ಅರ್ಧ ಓದಿದೆ . ಒಳ್ಳೇ ಪುಸ್ತಕ . ಬಸವಣ್ಣನ ಕುರಿತು ಅವನ ಸುತ್ತಲ ಜನರು ಏನು ಯೋಚಿಸಿರಬಹುದು ಎಂಬ ಕಲ್ಪನೆಗಳ ಪುಸ್ತಕ . ಬಸವಣ್ಣನನ್ನು ತಿಳಿಯಲು ಇದು ಸಹಾಯ ಮಾಡುವದು . ( ೧೯೮೨ ರಲ್ಲಿ ಮೊದಲ ಮುದ್ರಣ ಕಂಡ ಈ ಪುಸ್ತಕ , ೨೦೦೧ ರಲ್ಲಿ ಮರು ಮುದ್ರಣಗೊಂಡು ನನ್ನ ಕೈಗೆ ೨೦೦೮ ರಲ್ಲಿ ಬಂದಿದೆ! . ) ಇತ್ತೀಚೆಗೆ ಕುಂ.ವೀರಭದ್ರಪ್ಪ ಬರೆದ ’ಅರಮನೆ’ ಎಂಬ ಬೃಹತ್ ಕಾದಂಬರಿಯನ್ನು ಕೊಂಡೆ . ಆಮೇಲೆ ತಿಳಿಯಿತು ಇದಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ ಅಂತ . ಮೊದಲೇ ಏನನ್ನಾದರೂ ಓದುವದು ( ಸಮಯ ಸಿಗದಿರುವದೂ , ಟೀವೀ , ಪೇಪರ್ , ಇಂಟರ್ನೆಟ್ಟ್ ಇತ್ಯಾದಿಗಳು ಸಮಯ ಬೇಡುತಿರುವುದೂ ಕಾರಣ ) ಕಷ್ಟವಾಗಿರುವಾಗ ೬೦೦ ಪುಟಗಳ ಪುಸ್ತಕ ಆಡುಭಾಷೆಯಲ್ಲಿರುವ ಈ ಪುಸ್ತಕ ಓದುವದೂ ಒಂದು ಸಾಹಸವೇ . ದಿನಕ್ಕೆ ೧೦-೨೦ ಪುಟ ಮಾತ್ರ ಸಾಧ್ಯವಾಗುತ್ತಿದೆ. ಮುಗಿಸಲು ಒಂದೆರಡು ತಿಂಗಳೇ ಬೇಕೆಂದು ಕಾಣುತ್ತದೆ. ಇಲ್ಲಿ ಎ, ಏ , ಒ , ಓ , ಔ , ಐ ಅಕ್ಷರಗಳೇ ಇಲ್ಲಿ ಕಾಣುವದಿ