೧೯೩೨ ರಲ್ಲಿ ಅಚ್ಚಾದ ಒಂದು ಪತ್ತೇದಾರಿ ನೀಳ್ಗತೆಯೊಂದನ್ನು ನಾನು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದ ಈ ಕೊಂಡಿಯಲ್ಲಿ ಇಳಿಸಿಕೊಂಡು ಓದಿದೆ. ಅದರ ಹೆಸರು - ಎರಡೆರಡು ಹೆಸರು ಕೊಡುವ ಹಳೆಯ ವಾಡಿಕೆಯಂತೆ - "ಮಗನೇ ಅಲ್ಲ!! ಅಥವಾ ವಿಚಿತ್ರ ಕಾರಸ್ಥಾನ !" ಧಾರವಾಡದ ಬಳಿಯ ಆನಂದವನ, ಅಗಡಿಯ ಶ್ರೀ ಶೇಷಾಚಲ ಪ್ರೆಸ್ಸ್ ಮತ್ತು ಗ್ರಂಥಮಾಲೆಯ ಪ್ರಕಟಣೆ ಇದು. ಕನ್ನಡ, ದೇವನಾಗರೀ, ರೋಮನ್ ಲಿಪಿಗಳಲ್ಲಿ ಪ್ರಕಾಶನ ಸಂಶೆಯ ಹೆಸರನ್ನು ಬರೆದಿದ್ದಾರೆ . ಅಡಿಯಲ್ಲಿ - ಮರಾಠಿಯಲ್ಲಿ ' ಹೇ ಪುಸ್ತಕ ಬಿ.ಪ.ಕಾಳೆ , ಯಾನೀ ಅನಂದವನ-ಅಗಡಿ ಯೇಥೀಲ ಆಪಲ್ಯಾ ಶ್ರೀ ಶೇಷಾಚಲ ಛಾಪಖಾನ್ಯಾತ ಛಾಪಿಲೆ' ಅಂತ ಮರಾಠಿ-ದೇವನಾಗರಿಯಲ್ಲಿ ಮುದ್ರಿಸಿದ್ದಾರೆ! ಇದು ಸದ್ಬೋಧಚಂದ್ರಿಕೆಯ 'ಆಷಾಢ ಶಕೆ ೧೮೫೪, july 1932'ರ ನಾಲ್ಕನೇ ಸಂಚಿಕೆ . ಈ ಅಗಡಿಯ ಶೇಷಾಚಲ ಸಂಸ್ಥೆ, ಅಲ್ಲಿಯ ಶೇಷಾಚಲ ಸಾಧುಗಳು ಮಾಡಿದ ಕನ್ನಡ ಸೇವೆ ಅಪಾರವಾಗಿದ್ದಿರಬೇಕು. ಇರಲಿ. ಈ ಪುಸ್ತಕವನ್ನು ತಿರುವಿ ಹಾಕಿದಾಗ ...... ಈ ಕತೆಯು ೨೫ ಪುಟಗಳದ್ದು. ಪ್ರತಿ ಅಧ್ಯಾಯಕ್ಕೆ ಒಂದು ತಲೆಬರಹ - ಮತ್ತು ಒಂದು ಅಡಿಬರಹ . ಆ ತಲೆಬರಹಗಳು , ಅಡಿಬರಹಗಳು , ಒಳಗಿನ ಹೂರಣ ಏನೆಂದು ನೋಡೋಣ ಬನ್ನಿ . ೧) ಇದ್ದ ಮೂವರಲ್ಲಿ ಕದ್ದವರಾರು ? - (ರವಿಕಾಣದುದಂ ಕವಿ ಕಾಂಬಂ) ಒಂದು ಬ್ಯಾಂಕು , ಅಲ್ಲಿ ತಿಜೋರಿ , ಅದನ್ನು ತೆಗೆಯಬಲ್ಲವರು ಇಬ್ಬರು , ಮ್ಯಾನೇಜರೂ
ನಾಲ್ಕೈದು ತಿಂಗಳಿಂದ ಕೊಂಡು ಇಟ್ಟುಕೊಂಡಿದ್ದ 'ಕಸ್ತೂರಿ' ಸಂಚಿಕೆಗಳನ್ನು ಇತ್ತೀಚೆಗೆ ಓದಿದೆ. ತಕ್ಷಣ ಓದಲಾಗದಿದ್ದರೂ ತಡವಾಗಿ ಆದರೂ ಓದಿದ ಸಂತೋಷ ನನ್ನದಾಯಿತು. ಒಂದರಲ್ಲಿ ಕಸ್ತೂರಿಯ ಆರಂಭದ ಕುರಿತಾದ ಸಂಗತಿಗಳಿವೆ, ಆರಂಭದಿಂದಲೂ ಕಸ್ತೂರಿಯನ್ನು ಓದಿದ ಜನರ ಅನಿಸಿಕೆಗಳಿವೆ. ಟಾಂ ಸಾಯರ್ ಸಾಹಸಗಳ ಸಂಗತಿ ಪುಸ್ತಕ ವಿಭಾಗದಲ್ಲಿ ಸಿಕ್ಕಿತು. ಮಹಾತ್ಮಾ ಗಾಂಧಿಯವರ ಕೊನೆಯ ದಿನದ ಸಂಗತಿಗಳು ವಿವರವಾಗಿ ಇಲ್ಲಿ ಬಂದಿವೆ. ಮನುಷ್ಯನಿಗೆ ಸಾವು ಸಮೀಪಿಸಿದಾಗ ಹೇಗೋ ಆತನ ಬಾಯಿಂದ ಸಾವಿನ ಕುರಿತಾದ ಮಾತುಗಳು ಬರುತ್ತವಂತೆ. ಗಾಂಧೀಗಾಗಿ ರಾತ್ರಿ ಬೇಕಾಗುವ ಯಾರೋ ಲವಂಗದ ಪುಡಿಯನ್ನು ಬೆಳಿಗ್ಗೆ ತಯಾರು ಮಾಡುವ ಸಂಬಂಧ - ಗಾಂಧಿಯವರು 'ಈಗ ಏಕೆ ಮಾಡುತ್ತ ಕೂತಿದ್ದಾರೆ? ರಾತ್ರಿ ನಾನೇ ಇರುತ್ತೇನೋ ಇಲ್ಲವೋ ' ಎನ್ನುತ್ತಾರೆ. ಪತ್ರಿಕೆಯಲ್ಲೆಲ್ಲೋ ಗಾಂಧಿಯವರು ಫೆಬ್ರುವರಿ ಒಂದರಂದು ಲಾಹೋರಿಗೆ ಹೋಗಲಿದ್ದಾರೆ ಎಂಬ ಸಂಗತಿ ಅಚ್ಚಾಗಿರುತ್ತದೆ, ಅದಕ್ಕೆ ಗಾಂಧಿಯವರು 'ಫೆಬ್ರುವರಿ ಒಂದರಂದು ಲಾಹೋರಿಗೆ ಹೋಗುವ ಗಾಂಧಿ ಯಾರೋ? ' ಎಂದು ಪ್ರತಿಕ್ರಿಯಿಸುತ್ತಾರೆ ಎಂಬಂತಹ ಸಂಗತಿಗಳು ಮೈನವಿರೇಳಿಸುತ್ತವೆ. ಬ್ರಿಟಿಷರ ವಿರುದ್ದ ಬಂಡೆದ್ದ ನರಗುಂದ ಬಾಬಾಸಾಹೇಬನು ಗಲ್ಲಿಗೇರಲಿಲ್ಲವಂತೆ. ಈತನ ಹೆಂಡತಿ ಧಾರವಾಡದ ಕಲೆಕ್ಟರನ ಹೆಂಡತಿಯನ್ನು ಹಾವಿನ ಕಡಿತದಿಂದ ಸಾಯುವುದನ್ನು ತಪ್ಪಿಸಿದ್ದಳಂತೆ. ಈತನನ್ನ ಗಲ್ಲಿಗೇರಿಸಬೇಕಾದ ಅಧಿಕಾರಿಯು ಅದೇ ಕ
Comments