ನಾನು ನನ್ನ ಪರ್ಸನಲ್ ಕಂಪ್ಯೂಟರಿನಲ್ಲಿ ಲೀನಕ್ಸ್ ನ ಉಬುಂಟು ವನ್ನು ಹಾಕಿಕೊಂಡು ಬಳಸುತ್ತಿದ್ದೇನೆ. ಬಹುತೇಕ ಕನ್ನಡ ತಾಣಗಳು ಉಬುಂತುವಲ್ಲಿ ಇರುವುವಾದರೂ ಅಲ್ಲೊಂದು ಇಲ್ಲೊಂದು ವೆಬ್ ಪುಟಗಳು ಬರಹವನ್ನೋ ನುಡಿಯನ್ನೋ ಅಥವಾ ಮತ್ತಾವುದನ್ನೋ ಬಳಸಿ ಬರೆದವಾದಲ್ಲಿ ಓದಲೇ ಆಗುತ್ತಿರಲಿಲ್ಲ . ಬಹುಶಃ ವಿಂಡೋಸ್ ನಲ್ಲಿ ಕೂಡ ಸಂಬಂಧಪಟ್ಟ ಫಾಂಟ್ ಇಲ್ಲದಿದ್ದರೆ ಅಲ್ಲೂ ಕಾಣಿಸಲಿಕ್ಕಿಲ್ಲ. ಅಂಥ ಸಮಯದಲ್ಲಿ ಇವತ್ತು ಗೂಗಲ್ ನಲ್ಲಿ ಹುಡುಕಿದಾಗ ಸಿಕ್ಕ ಕೊಂಡಿ ಇದು. http://aravindavk.in/ascii2unicode/ ಆ ಪುಟದಲ್ಲಿ ನುಡಿ/ಬರಹದಲ್ಲಿ ಬರೆದಿದ್ದನ್ನು ಯುನಿಕೋಡ್ ಕನ್ನಡಕ್ಕೆ ಬದಲಾಯಿಸಲು ಸಹಾಯ ಮಾಡುವ ತಂತ್ರಾಂಶ ಇದೆ. ಎಡಗಡೆ ಇರುವ ಜಾಗದಲ್ಲಿ ನುಡಿ/ಬರಹ ದಲ್ಲಿ ಬರೆದ ಪಠ್ಯವನ್ನು ಹಾಕಿ ನಂತರ ಕನ್ವರ್ಟ್ ಅಂತ ಇರುವ ಬಟನ್ ಒತ್ತಿ. ಪಕ್ಕದ ಜಾಗದಲ್ಲಿ ಯುನಿಕೋಡ್ ಗೆ ಬದಲಾವಣೆಗೊಂಡು ಕಾಣಿಸುತ್ತದೆ. ಅರವಿಂದರಿಗೆ ತುಂಬಾಆಆಆಆಆಆಆ ಧನ್ಯವಾದಗಳು.
ಧಮ೯ ವೆಂಬ ವೃಕ್ಷಕ್ಕೆ ಮನಸ್ಸೇ ಬೇರು - ಸಂಸಾರದಲ್ಲಿ ಸಂಸತ್ತನ್ನು ದಾನ ಮಾಡುವದೇ ದೊಡ್ಡ ತಪಸ್ಸು . ಸಂಪತ್ತಿನ ದಾನವು ಪ್ರಾಣದಾನ. ಪ್ರಾಣವು ಸಂಪತ್ತಿನಲ್ಲಿ ಬಂಧಿತವಾಗಿದೆ . ಕರುಣೆಯಿಂದ ವ್ಯಾಕುಲನಾದ ಬುದ್ಧನು ಬೇರೆಯವರಿಗಾಗಿ ಆತ್ಮವನ್ನೇ ಹುಲ್ಲುಕಡ್ಡಿಯಂತೆ ಡಾನ್ ಮಾಡಿದನು. ಇನ್ನು ತುಚ್ಚವಾದ ಹಣದಿಂದ ಏನು? ಪ್ರಾಜ್ಞನು ಎಲ್ಲ ಆಸೆಗಳಿಂದ ದೂರವಾಗಿ ಶರೀರ ಇರುವ ತನಕ ಸಮ್ಯಕ್ ಜ್ಞಾನವನ್ನು ಪಡೆಯಲು ಪ್ರಾಣಿಗಳಿಗೆ ಹಿತವನ್ನು ಉಂಟು ಮಾಡಬೇಕು. ಸಂಸಾರದಲ್ಲಿ ಪರೋಪಕಾರವೊಂದೇ ಸಾರವುಳ್ಳದ್ದು.ಆದ್ದರಿಂದ ಈ ಶರೀರದಿಂದ ಪ್ರಾಣಿಗಳಿಗೆ ಹಿತವನ್ನು ಉಂಟು ಮಾಡೋಣ. ಅವನು ನನಗೆ ಕೆಟ್ಟದ್ದನ್ನ ಮಾಡಿಲ್ಲ , ಉಪಕಾರವನ್ನು ಮಾಡಿದ್ದಾನೆ. ಇಲ್ಲದಿದ್ದರೆ ನಾನು ಯಾರನ್ನು ಕ್ಷಮಿಸಬಹುದಿತ್ತು ? ಪ್ರಾಜ್ಞರಿಗೆ ತಮ್ಮ ದೇಹದ ಮೇಲೇ ಮಮಕಾರವು ಇಲ್ಲದ ಮೇಲೆ ಹೆಂಡತಿ ಮಕ್ಕಳು ತೃಣ ಸಮಾನ. ರಾಜನೂ ಸಹ ಅವಳ ಚಿಂತೆಯನ್ನು ಬಿಟ್ಟು, ಮಂತ್ರಿಯ ಮಾತನ್ನು ನೆನೆಯುತ್ತಾ ತನಗೆ ಲಭ್ಯವಾದ ರಾಜ್ಯ, ಪತ್ನಿ, ಸುತರೊಂದಿಗೆ , ( ಅವರ / ಅದರ ಮಹತ ವನ್ನು ತಿಳಿದು) ಆನಂದದಿಂದ ಇದ್ದನು. ನೀತಿ ಎಂಬ ಕಲ್ಪವೃಕ್ಷದ ಬಳ್ಳಿ ಫಲ ನೀಡಿಯೇ ತೀರುತ್ತದೆ ವಸ್ತ್ರಗಳನ್ನೂ ಆಭರಣಗಳನ್ನೂ ನೀಡಿ ಗೌರವಿಸಿದನು
Comments