Posts

ನನ್ನ ಬೆಲೆ ! ಒಂದುದಿನ ಹೆಮ್ಮೆಯಲಿ ನನ್ನವಳಿಗೆ ಹೇಳಿದೆನು- ’ನನ್ನ ಬೆಲೆ ಎಷ್ಟು ಗೊತ್ತೆ ? ... ಲಕ್ಷ’ :) ’ನನ್ನರಸ ಸುಮ್ಮನಿರಿ, ಯಾರಾದರೂ ಕೇಳಿಯಾರು, ನಮ್ಮ ಕೆಲಸದವಳ ಬಳಿ ಅಷ್ಟು ಬೆಲೆಯ ಫ್ಲ್ಯಾಟಿದೆ ’ :( :(
ಅಂತರ್ಜಾಲದಲ್ಲಿರೋ ನವೆಂಬರ್ ೧೯೫೮ ರ ಚಂದಮಾಮದಲ್ಲಿ * ಅತಿಶಯ ತಿರುಡನ್ ತಿಮಿಳು ಚಿತ್ರದ ಜಾಹೀರಾತು , * ಪಂಡಿತ ಡಿ. ಗೋಪಾಲಾಚಾರ್ಲುರವರ "ಅರುಣ" ಗರ್ಭಾಶಯ ಟಾನಿಕ್ ಜಾಹೀರಾತು ... ಹೆಚ್ಚು ವಿವರಗಳಿಲ್ಲ ಆದರೆ ಅದು ಚಂದಮಾಮ ದಲ್ಲಿ . ... ಯಾಕೋ ?? * ಪೂರ್ವ ಪಂಜಾಬಿನ ಸುಂದರವಾದ ಕಾಂಗ್ರಾ ಜಿಲ್ಲೆಯಲ್ಲಿ ಉನ್ನತ ಹಿಮಾಲಯದ ತಪ್ಪಲಲ್ಲಿ ಒಂದು ಪ್ರಶಾಂತ ಸ್ಥಳವಿದೆ - ಇದು ಕೂಲು ಕಣಿವೆ . :) ( ಅವರು ಕುಲು ಕಣಿವೆ ಬಗ್ಗೆ ಹೇಳ್ತಿದಾರೆ ! )
ಕನ್ನಡ ವಿಕಿಪೀಡಿಯಾಗಾಗಿ ಸಂಗೀತಾ ಕಟ್ಟಿ ಅವರ ಬಗ್ಗೆ ಒಂದು ಬರಹವನ್ನ ಕನ್ನಡಿಸಿರುವೆ.
ಎರಡು ಪುಟ್ಟಾತಿಪುಟ್ಟ ಕತೆಗಳು .. ೧) ಜಯಂತ ಕಾಯ್ಕಿಣಿಯವರ ಕತೆಗಳು ನಿಜಕ್ಕೂ ಅದ್ಭುತ ಕತೆಗಳು. ನನ್ನ ಗೆಳೆಯನೊಬ್ಬನಿಗೆ ಅವುಗಳನ್ನು ಕೊಟ್ಟು ಓದಿಸೋಣ ಅಂತ ಆ ಮೂರೂ ಕಥೆ ಪುಸ್ತಕಗಳನ್ನು( ತೂಫಾನ್ ಮೇಲ್ , ಜ.ಕಾ.ಕಥೆಗಳು , ಬಣ್ಣದ ಕಾಲು) ಕೊಂಡು ಅವನ ಮನೆಗೆ ಹೋದೆ . ಅವನಿಗೆ ಕೊಟ್ಟೆ. ಅವನು ಟೇಬಲ್ ಮೇಲೆ ಇಡೋ ಹೊತ್ತಿಗೇ ಅವನ ಮಾವ ಬಂದ್ರು . ನಾನು ಓದ್ತೀನಿ ಅಂತ ತಕೊಂಡೋದ್ರು. ಇದು ಕತೆ ಆಗುತ್ತೋ ಇಲ್ಲವೋ ನೀವೇ ಹೇಳಬೇಕು .. ಗೆಳೆಯರೊಬ್ಬರು ಇದರಲ್ಲಿ ತತ್ವಜ್ಞಾನ ಕಂಡರು ... ನಾನು ರಹಸ್ಯಾತ್ಮಕ ನಿಗೂಢ ಕತೆ ... ಅಂದೆ. ಮುಂದೇನಾಯ್ತು ಅಂತ ಇಲ್ಲ. ಮಾವ ಓದಿದನೋ ? ಮರಳಿ ಕೊಟ್ಟನೋ ? ಇವನು ಓದಿದನೋ? ನಾನು ಕೇಳಿದೆನೆ ? ಇಲ್ಲವೆ? ಎರಡು ಪುಟ್ಟಾತಿಪುಟ್ಟ ಕತೆ ಹೇಳ್ತೀನಂತ ಹೊರಟು ಒಂದೇ ಕತೆ ಹೇಳ್ದೆ ! ವಯಸ್ಸಾದಾಗ ಮನುಷ್ಯನಿಗೆ ಎರಡು ಸಮಸ್ಯೆ ಕಾಡುತ್ವೆ ... ಒಂದೂ ...... ನೆನಪು ಕೈಕೊಡುತ್ತೆ. ಮರೆವಿನ ತೊಂದರೆ ಶುರು‌ಆಗತ್ತೆ ... ಇನ್ನೊಂದೂ .... .... ... ನಾನು ಏನ್ ಹೇಳ್ತಾ ಇದ್ದೆ ?
http://kn.wikipedia.org/wiki/ಕೆಂಗಲ್_ಹನುಮಂತಯ್ಯ ಅನುವಾದ ಸಂಪೂರ್ಣ http://kn.wikipedia.org/wiki/ಮರಾಠ_ಸಾಮ್ರಾಜ್ಯ ಕೂಡ ಅರ್ಧ ಆಗಿದೆ
ಕೊಲೆಗಾರರು ಯಾರು ? ಒಂದು ಹಾಸ್ಯ ಲೇಖನ ಸಂಪದದಲ್ಲಿ ’ ಕೊಲೆಗಾರರು ಯಾರು ? ’ ಬರಹ ಓದುತ್ತಿದ್ದಂತೆ ನಾನು ಹಿಂದೊಮ್ಮೆ ಸುಧಾದಲ್ಲಿ ಓದಿದ ಹಾಸ್ಯ ಬರಹ ನೆನಪಾಯಿತು . ಅದು ಯಾರು ಬರೆದಿದ್ದದ್ದು ನೆನಪಿಲ್ಲ ; ವಿಷಯ ಮುಖ್ಯ ತಾನೆ ? ಓದಿ ಸಂತಸ ಪಡಿ . ಒಬ್ಬ ಪತ್ತೇದಾರಿ ಸಾಹಿತ್ಯದ ಓದಿನ ಗೀಳಿನ ಮನುಷ್ಯ ಇರ್ತಾನೆ . ಅವನಿಗೆ ಒಂದ್ಸಲ ಓದಕ್ಕೆ ಏನೂ ಇಲ್ದೆ ತನ್ನ ಗೆಳೆಯನ ಹತ್ರ ಹೋಗಿ ಓದಕ್ಕೆ ಏನಾದ್ರೂ ಕೊಡೋ ಅಂತ ಕೇಳಿದಾಗ ಅವನು ಕೈಗೆ ಸಿಕ್ಕ ಪುಸ್ತಕಾನ ಕೊಟ್ಟು ಕಳಿಸ್ತಾನೆ . ಅದು ಷೇಕ್ಸಪಿಯರನ ಮ್ಯಾಕ್‍ಬೆತ್ ನಾಟಕದ ಅನುವಾದ . ಡಿ. ವಿ. ಜಿ ಅವರದ್ದು , ಹಳೆಗನ್ನಡ ಶೈಲಿಯಲ್ಲಿದೆ . ಮರುದಿನ ಅವನು ಬಂದು ಪುಸ್ತಕ ವಾಪಸ್ ಕೊಡ್ತಾ ಹೇಳ್ತಾನೆ ... ನಂಗೆ ಮ್ಯಾಕ್‍ಬೆತ್ ಮಾಡಿದ್ದು ಅನ್ನಿಸ್ಲಿಲ್ಲ . ’ಏನೋ?’ ’ಅದೇ ಮರ್ಡರು ’ ’ಯಾಕೋ’ ಈಗ ಅವರ ನಡುವೆ ಚರ್ಚೆ . ನಾನಾ ಥಿಯರಿಗಳು . ಆ ನಾಟಕದಲ್ಲಿ ಆಗಿರೋ ಕೊಲೇನ ಯಾರು ಮಾಡಿದ್ದು ? ಅಂತ ! --ಕ್ಲಿಯರ್ ಆಗೇ ಇದೆಯಲ್ಲೋ ? ಮ್ಯಾಕ್‍ಬೆತ್ ಮಾಡಿದ್ದು ಅಂತ ? -- ಅದ್ಯಾವ ಸೀಮೆ ಪತ್ತೇದಾರಿನೋ ? ಮೊದಲ ನೋಟಕ್ಕೆ ಕೊಲೆಗಾರ ಅನ್ನಿಸಿದೋನು ಕೊಲೆ ಮಾಡಿರೋದಿಲ್ಲ , ಇಷ್ಟೂ ಗೊತ್ತಿಲ್ವೇ ನಿಂಗೆ ? --ನಾಯಕಿ ಇರ್ತಾಳಲ್ಲ ? ಅವಳೇ ಇರಬೇಕು . ಮೇಣದ ಬತ್ತಿ ಹಿಡಿದು ಸಂಶಯಾಸ್ಪದ ಆಗಿ ರಾತ್ರಿ ಹೊತ್ತು ಓಡಾಡ್ತ ಇರ್ತಾಳಲ್ಲ ? ಒಂದು ವೇಳೆ ಅವಳಲ್ಲದಿದ್ರೆ ...
ಬರವಣಿಗೆಯ ಕನ್ನಡದ ದಿಕ್ಕು ಕನ್ನಡದಲ್ಲಿ ಸಂಸ್ಕೃತದ ಅತಿಬಳಕೆಯಿಂದ , ಸಂಸ್ಕೃತದ ಕಾಗುಣಿತ(ಸ್ಪೆಲ್ಲಿಂಗ್ಸ್ ) ನಿಂದಾಗಿ ಹಳ್ಳಿಗರಿಗೆ ಮತ್ತು ಸಂಸ್ಕೃತದ ಪರಿಚಯ ಇಲ್ಲದವರಿಗೆ ( ಅಂದರೆ ’ಕೆಳ’ ಎಂದು ತಿಳಿದಿರುವ ಜಾತಿಯ ಜನಕ್ಕೆ) ತೊಂದರೆ ಆಗಿದೆಯಂತೆ . ಅದಕ್ಕಾಗಿ ಮಹಾಪ್ರಾಣ , ಷ ಇತ್ಯಾದಿ ಅಕ್ಷರಗಳನ್ನು ತೆಗೆದು ಹಾಕಿ ಎಂಬ ವಾದ ಒಂದೆಡೆ ಎದ್ದಿದೆ . ( ಅಂದ ಹಾಗೆ ಚಾಯನೀಸ್ ಭಾಶೆಯಲ್ಲಿ ಸಾವಿರಾರು ಅಕ್ಶರಗಳಂತೆ ; ಅವರಿಗೆ ಏನು ತೊಂದರೆ / ಎಷ್ಟು ತೊಂದರೆ ಆಗಿದೆಯೋ ಏನೋ ; ಅವರು ಬಳಸ್ತಾ ಇಲ್ವೀ ; ನೂರಾರು ವರುಷ ಅದು ಬಾಳಿ ಬದುಕಿಲ್ವೇ? -- ನನಗೆ ಸರಿಯಾಗಿ ಗೊತ್ತಿಲ್ಲ) ಸರಿ ಈ ವಾದಾನೂ ಒಪ್ಕೊಳ್ಳೋಣ ; ಶಂಕರ ಭಟ್ಟರ ವಾದಾನೂ ಒಂತರ ಸರೀನೇ ; ಭಾಶೆಯ ಕಠಿಣತನವನ್ನು ಕಡಿಮೆ ಮಾಡಿ , ಪರಸ್ಪರ ಓದಿ , ಬರೆಯಲು , ಹೆಚ್ಚಿನ ತಿಳಿವು ಪಡೆದು , ಬದುಕನ್ನು ಶ್ರೀಮಂತಗೊಳಿಸಲು ಸರಳಗೊಳಿಸೋಣ ; ಅದಕ್ಕೆ ನನ್ನ ಒಪ್ಪಿಗೆಯೂ ಇದೆ ; ಆದರೆ ಈಗಾಗಲೇ ಬಳಕೆಯಲ್ಲಿರೋ ಎಲ್ಲಾ ಸಂಸ್ಕೃತ ಶಬ್ದಗಳನ್ನ ಬದಲಿಸಲೇಬೇಕೆಂಬ ಹಟ ಏಕೆ ? ಎಲ್ರಿಗೂ ತಿಳಿಯೋ ಕನ್ನಡ ಶಬ್ದ ಇದ್ರೆ ಸರಿ , ಅದನ್ನು ಸಂಸ್ಕ್ರುತ ಶಬ್ದಕ್ಕೆ ಬದಲಾಗಿ ಬಳಸೋಣ ; ಸಂಸ್ಕೃತದ ಮೇಲಿನ ದ್ವೇಶದಿಂದ ಎಲ್ಲರಿಗೂ ತಿಳಿಯೋ ಶಬ್ದಗಳನ್ನು , ಅವು ಸಂಸ್ಕ್ರುತ ಎಂಬ ಒಂದೇ ಕಾರಣಕ್ಕೆ , ಅದಕ್ಕೆ ಬದಲಿಯಾಗಿ ಯಾರಿಗೂ ಗೊತ್ತಿಲ್ಲದ ಶಬ್ದಗಳನ್ನು ಹೆಕ್ಕಿ ತೆಗೆಯೋದು ಏಕೆ ? ದಿನ , ವರ್ಷ ಎಲ್ರಿಗೂ...
ವಿಕಿಪೀಡಿಯದಲ್ಲಿ ಈ ವಾರ ನಾನು ಅನುವಾದಿಸಿದ ಪುಟಗಳು ವಿಲಿಯಂ ಷೇಕ್ಸ್‌ಪಿಯರ್ ಚಂದ್ರಗುಪ್ತ ಮೌರ್ಯ ಭಾಸ ಜಗದೀಶ್‌ಚಂದ್ರ ಬೋಸ್ ಇವನ್ನು ಇಂಗ್ಲೀಷಿನಿಂದ ಕನ್ನಡಿಸಿದೆನು .
ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ ನಿಸರ್ಗ - ಇದು ಕನ್ನಡದ ಮೊದಲ ಪ್ರಾದೇಶಿಕ ಕಾದಂಬರಿ ಎಂಬ ಹೆಗ್ಗಳಿಕೆ ಹೊಂದಿದೆ . ಇದನ್ನು ೧೯೪೫ ರಲ್ಲಿ ಬರೆದವರು ಮಿರ್ಜಿ ಅಣ್ಣಾರಾಯರು . ಅನೇಕ ಮುದ್ರಣಗಳನ್ನು ಕಂಡಿದೆ . ಬೆಳಗಾಂವಿಯ ಈ ಭಾಗದ ಕನ್ನಡ ಪರಿಚಯ ನಿಮಗೆ ಇರಲೆಂದು ಆ ಕಾದಂಬರಿಯ ಮುನ್ನುಡಿಯ ಭಾಗವೊಂದನ್ನು ಇಲ್ಲಿ ಕೊ(ಕು)ಟ್ಟಿದ್ದೇನೆ . ಕೆಲವು ಶಬ್ದರೂಪಗಳು , ವ್ಯಾಕರಣರೂಪಗಳು ವಿಶಿಷ್ಟವಾಗಿವೆ . ಮುಖ್ಯವಾದವನ್ನು ಇಲ್ಲಿ ತಿಳಿಸುವೆ . * ಏನು = ಯಾನು , ಏನಾದರೂ = ಯಾನರ , ಏಕೆ ಯಾಕೆ ಆದ ಹಾಗೆ ಏನಂತೆ ಇದು ಯಾನತ್ತ ಆಗುವದು * ಚತುರ್ಥೀಪ್ರತ್ಯಯವದ ’ಗೆ’ ಇದು ’ಗಿ’ ಆಗುವದು . ಅವರಿಗೆ =ಅವರಿಗಿ , ಮನೆಗೆ=ಮನಿಗಿ , ಆಕೆಗೆ=ಆಕಿಗಿ , ದನಕ್ಕೆ = ದನೀಗಿ .. ಎಕಾರಾಂತವೆಲ್ಲ ಇಕಾರಾಂತ ಆಗುವ ಪ್ರವೃತ್ತಿ ಇದೆ . ಈಕಡೆ= ಇಕಡಿ , ನಿನ್ನೆ=ನಿನ್ನಿ , ಆನೆಗೆ=ಆಣಿಗಿ , ಕಪಾಳಕ್ಕೆ = ಕಪ್ಪಾಳಿಗಿ * ಉಕಾರಾಂತವು ಅಕಾರಾಂತವಾಗುವದು . ಹೆಣ್ಣುಮಗಳು= ಹೆಣ್ಣುಮಗಳ , ಸೊಸೆಂದಿರು=ಸೊಸದೇರ * ಶಬ್ದದ ಒಳಗೂ ಏ ಇದು ಯಾ ಆಗುವದು . ಹೆಂಡತಿ= ಹ್ಯಾಂತಿ , ತೆವರು = ತ್ಯಾವರಾ , ಕಡೆಯವರು = ಕಡ್ಯಾವರಾ * ಷಷ್ಠಿಯ ಕೆಲವು ವಿಕೃತ ರೂಪಗಳಿವೆ . ದನದ = ದನೀನ , ಕರುವಿನ / ಕರದ= ಕರೀನ * ಹಾಗೆಯೇ ದ್ವಿತೀಯಾದಲ್ಲಿ ಅವರನ್ನು = ಅವರ್ನಾ * ಇದೆ=ಐತಿ , ಬರುತ್ತದೆ = ಬರತೇತಿ * ಕ್ರಿಯಾರೂಪದಲಿಯೂ ಏ ಯಾ ಅಗಿರುವದು ಬಹಳ . ಕೊಡುತ್ತೇನೆ= ಕೊ...
ಭಾಷೆಗಳೆಷ್ಟೋ , ಪುಸ್ತಕಗಳೆಷ್ಟೋ ಓದಲಾರೆ ಎಲ್ಲವನು ಸಿನೆಮಾಗಳೆಷ್ಟೋ ಛಾನೆಲ್ಲುಗಳೆಷ್ಟೋ ನೋಡಲಾರೆ ಎಲ್ಲವನು ಹಾಡುಗಳೆಷ್ಟೋ ಸಂಗೀತವದೆಷ್ಟೋ ಕೇಳಲಾರೆ ಎಲ್ಲವನು ಆಯುಷ್ಯವೆಷ್ಟೋ , ದಿನದಲಿ ಬಿಡುವು ಅದೆಷ್ಟೋ ಕಣ್ಣು ಕಿವಿಗಳಿರುವದೇ ಎರಡು ಯಾವುದ ಓದಲಿ? ಯಾವುದ ಕೇಳಲಿ ? ಬಿಟ್ಟೇಬಿಟ್ಟೆನು ಎಲ್ಲವನು !
ಸಖೇದಾಶ್ಚರ್ಯ ಅಂತ ನೀವು ಶಬ್ದ ನೋಡಿರಬಹುದು ... ಏನು ಈ ಶಬ್ದದ ಅರ್ಥ ? ಆಶ್ಚರ್ಯದಿಂದ ಅನ್ನೋ ಅರ್ಥದಲ್ಲಿ ಬಳಸ್ತಾರೆ , ನಿಜ . ಈ ಶಬ್ದವನ್ನು ಅರ್ಥ ಮಾದಿಕೊಳ್ಳಲು ಪ್ರಯತ್ನಿಸಿದರೆ ಖೇದ ( ದು:ಖ) ಮತ್ತು ಆಶ್ಚರ್ಯಗಳಿಂದೊಡಗೂಡಿ ಎಂದಾಗುತ್ತದೆಯೆ ? ಖೇದ ಶಬ್ದ ಯಾಕೆ ಇಲ್ಲಿ ? ಅಥವಾ ಬೇರೇನಾದರೂ ಅರ್ಥ ಇದೆಯೇ ಈ ಶಬ್ದಕ್ಕೆ? ಅಂದ ಹಾಗೆ ನೀವು ಸನಿಹ/ಸನಿಯ ಆಡುಮಾತಲ್ಲಿ ನೋಡಿದ್ದೀರಾ ? ನನಗೆ ಒಮ್ಮೆಲೇ ಹೊಳೆಯಿತು ... ನಮ್ಮಲ್ಲಿ ಬಳಸುವ .. ಸನೇ / ಸನೇಕ ಅದೇ ಶಬ್ದ ! ಅವನ ಸನೇ(ಕ) ಹೋಗಬ್ಯಾಡ.... ಅಂದರೆ ಅವನ ಹತ್ರ ಹೋಗಬ್ಯಾಡ....
ಮತ್ತೆ ಇತ್ತೀಚಿಗೆ ಆ ’ಬೆರಗು’ ಪುಸ್ತಕ ಮುಗಿಸಿದೆ . ನಿಜಕ್ಕೂ ಚೆನ್ನಾಗಿದೆ . ಒಮ್ಮೆ ಓದಲೆಬೇಕು . ’ಸೈನೈಡ್’ ಸಿನೆಮಾ ಉಳಿದ ಭಾಗ ನೋಡಿದೆ . ಸಂಯಮ ಭರಿತ ಸಿನೆಮಾ . ನಿಜವಾದ ಘಟನೆ ಆಧಾರಿತ ಎನ್ನೋದು ಬಿಟ್ರೆ ವಿಶೇಷ ಏನಿಲ್ಲ ; ಹೆಚ್ಚಿನ ಥ್ರಿಲ್ ಆಗಲಿ ಒಳನೋಟಗಳಾಗಲೀ ಇಲ್ಲ. ಆಮೇಲೆ ಈ ರವಿವಾರ ಗಾಳಿಗೋಪುರ ಮತ್ತು ನಾಂದಿ, ಕರುಣೆಯೇ ಕುಟುಂಬದ ಕಣ್ಣು ಎಂಬ ಮೂರು ಚಿತ್ರಗಳ ಒಂದು ಡೀವೀಡೀ ಬರೀ ೬೦ ರೂ. ಗೆ ತಂದಿದ್ದು ಗಾಳಿಗೋಪುರ ನೋಡಿದೆ . ಸಾಕಷ್ಟು ಉದ್ದದ ಸಿನೇಮಾ . ಇತ್ತೀಚೆಗೆ ಅನೇಕ ’ಸುಧಾ’ಗಳನ್ನು ಇನ್ನೊಮ್ಮೆ ನೋಡಿ , ಬೇಕಾದ ಹಾಳೆ ಹರಿದು ಇಟ್ಟುಕೊಂಡು ( ಬೇಡದ ಹಾಳೆಗಳನ್ನೂ ಹರಿಯಬೇಕಾಗುತ್ತದೆ ; ಆ ವಿಷಯ ಇನ್ನೊಮ್ಮೆ ಬರೆವೆ) ವಿಲೇವಾರಿ ಮಾಡಿದೆ. ಅದರಲ್ಲಿ ರಾವಣನ ಪುನರ್ಜನ್ಮದ ಕಣಸು ಎಂಬ ಧಾರಾವಾಹಿ ಬಂದಿತ್ತು .. ಎಷ್ಟೋ ರಾಮಾಯಣ, ಮಹಾಭಾರತ ಓದಿದ್ದೇನೆ ... ತಿಣುಕಿದನು ಫಣಿರಾಯ ರಾಮಾಯಣಗಳ ಭಾರದಲಿ ಅಂತ ಇದೆಯಲ್ಲ ... ಅವರ ದೃಷ್ಟಿಯಲ್ಲಿ , ಇವರ ಕಣ್ಣಿನಲ್ಲಿ ಇತ್ಯಾದಿ .. ಅದಕ್ಕೆ ಓದಿರಲಿಲ್ಲ . ಅದರಲ್ಲಿ ಇರುವದಾದರು ಏನು .. ನೋಡೋಣ, ರಾವಣನ ಪುನರ್ಜನ್ಮವೇ ? ಏನದು ? ಅವನ ಕಣಸು ಏನು ? ಅಂತ . ರಾವಣ ಸೋತು ಸಾಯುವ ಮೊದಲು ಆಸೆಪಡುತ್ತಾನೆ, ಸೀತೆ ಅವನನ್ನ ಅಪ್ಪಿಕೋಬೇಕು , ಅವನು ರಾಮನನ್ನು ಸೋಲಿಸಿ ಸೀತೆಯನ್ನು ಅವನಿಗೆ ಒಪ್ಪಿಸಬೆಕು . ಅಂತ .. ಈ ಬಯಕೆ ಈಡೇರೋದು ... ಮುಂದಿನ ಜನ್ಮದಲ್ಲಿ ... ರಾವಣ, ಕು...
ನಿನ್ನೆ ಸಮಯ ಕಳೆದ ಪರಿ - ಪುಸ್ತಕ ಮತ್ತು ಸಿನೇಮಾ ನಿನ್ನೆ ದಿನ ರಜೆ ಇತ್ತು ; ಮೃತ್ಯುದಂಡ ಎಂಬ ಹಿಂದಿ ಸಿನೆಮಾವನ್ನು ಹದಿನೈದಾಣೆಯೂ , ಕನ್ನಡ ಸೈನೈಡ್ ಅನ್ನು ಅರ್ಧದಷ್ಟೂ , ಸರ್ವಕಾಲಸುಂದರಿ ಶರ್ಮಿಳಾ ಟಾಗೋರ್ ಳ ಸಿನೆಮಾ -ಆನ್ ಈವನಿಂಗ್ ಇನ್ ಪ್ಯಾರಿಸ್ - ಅರ್ಧದಷ್ಟೂ ನೋಡಿದೆ. ಡಾ.ಪ್ರಭುಶಂಕರ ಬರೆದ ಬಸವಣ್ಣನ ಕುರಿತಾದ ’ಬೆರಗು’ ಎಂಬ ಪುಸ್ತಕವನ್ನೂ ಅರ್ಧ ಓದಿದೆ . ಒಳ್ಳೇ ಪುಸ್ತಕ . ಬಸವಣ್ಣನ ಕುರಿತು ಅವನ ಸುತ್ತಲ ಜನರು ಏನು ಯೋಚಿಸಿರಬಹುದು ಎಂಬ ಕಲ್ಪನೆಗಳ ಪುಸ್ತಕ . ಬಸವಣ್ಣನನ್ನು ತಿಳಿಯಲು ಇದು ಸಹಾಯ ಮಾಡುವದು . ( ೧೯೮೨ ರಲ್ಲಿ ಮೊದಲ ಮುದ್ರಣ ಕಂಡ ಈ ಪುಸ್ತಕ , ೨೦೦೧ ರಲ್ಲಿ ಮರು ಮುದ್ರಣಗೊಂಡು ನನ್ನ ಕೈಗೆ ೨೦೦೮ ರಲ್ಲಿ ಬಂದಿದೆ! . ) ಇತ್ತೀಚೆಗೆ ಕುಂ.ವೀರಭದ್ರಪ್ಪ ಬರೆದ ’ಅರಮನೆ’ ಎಂಬ ಬೃಹತ್ ಕಾದಂಬರಿಯನ್ನು ಕೊಂಡೆ . ಆಮೇಲೆ ತಿಳಿಯಿತು ಇದಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ ಅಂತ . ಮೊದಲೇ ಏನನ್ನಾದರೂ ಓದುವದು ( ಸಮಯ ಸಿಗದಿರುವದೂ , ಟೀವೀ , ಪೇಪರ್ , ಇಂಟರ್ನೆಟ್ಟ್ ಇತ್ಯಾದಿಗಳು ಸಮಯ ಬೇಡುತಿರುವುದೂ ಕಾರಣ ) ಕಷ್ಟವಾಗಿರುವಾಗ ೬೦೦ ಪುಟಗಳ ಪುಸ್ತಕ ಆಡುಭಾಷೆಯಲ್ಲಿರುವ ಈ ಪುಸ್ತಕ ಓದುವದೂ ಒಂದು ಸಾಹಸವೇ . ದಿನಕ್ಕೆ ೧೦-೨೦ ಪುಟ ಮಾತ್ರ ಸಾಧ್ಯವಾಗುತ್ತಿದೆ. ಮುಗಿಸಲು ಒಂದೆರಡು ತಿಂಗಳೇ ಬೇಕೆಂದು ಕಾಣುತ್ತದೆ. ಇಲ್ಲಿ ಎ, ಏ , ಒ , ಓ , ಔ , ಐ ಅಕ್ಷರಗಳೇ ಇಲ್ಲಿ ಕಾಣುವದಿ...
ಪರಸ್ಪರ ಪ್ರೇಮಿಸುತ್ತಿರುವ ಹುಡುಗಿ ಮತ್ತು ಹುಡುಗ ಈಗಲೇ ಮದುವೆ ಆಗುವ ಹಾಗಿಲ್ಲ ; ಯಾಕಂದರೆ ಹುಡುಗ ನಿರುದ್ಯೋಗಿ . ಕೆಲಸಕ್ಕಾಗಿ ಅಲೆಯುತ್ತಿದ್ದಾನೆ . ಅವನಿಗೆ ಕೆಲಸ ಸಿಗೋದು ಯಾವಾಗ ? ತಾವು ಮದುವೆ ಆಗೋದು ಯಾವಾಗ ? ಎಂಬರ್ಥದ ಹಾಡು ’ಮೂರು ಮಹಾನ್ ಸಮಸ್ಯೆಗಳ ಚಿತ್ರಣ’ ಎಂಬ ಜಾಹೀರಾತಿನೊಂದಿಗೆ ಬಂದಿದ್ದ ’ರೋಟಿ ಕಪಡಾ ಔರ್ ಮಕಾನ್’ ಚಿತ್ರದಲ್ಲಿದೆ. ಈ ಹಾಡನ್ನು ಝೀ ಮ್ಯೂಸಿಕ್ ಚಾನೆಲ್ಲಿನಲ್ಲಿ ನೋಡಬಹುದು . ಇಬ್ಬರೂ ಶ್ರಾವಣದ ಮಳೆಯಲ್ಲಿ ನೆನೀತಾ ಇರೋವಾಗ ಅವಳು ಹಾಡುವ ಹಾಡು ಇದು .( ಹಾಯ್ ಹಾಯ್ ಏ ಮಜಬೂರಿ ) ಸಾಕಪ್ಪಾ ಸಾಕು ಈ ಋತುಮಾನ, ಮತ್ತೆ ಈ ದೂರ ನನ್ನನ್ನು ಪ್ರತಿಕ್ಷಣ ಗೋಳಾಡಿಸುತ್ತಿವೆ ನಿನ್ನ ನಾಕು ಕಾಸಿನ ನೌಕರಿ ದಾರಿ ಕಾಯ್ದು ನನ್ನ ಲಕ್ಷಾಂತರದ ಶ್ರಾವಣ ವ್ಯರ್ಥವಾಗುತಿದೆ ಎಷ್ಟು ಶ್ರಾವಣ ಕಳೆದವು , ಆಸೆಯಿಟ್ಟುಕೊಂಡು ಕಾದಿರುವೆ , ನಲ್ಲನು ಒದಗುವ ಶ್ರಾವಣ ಬಂದೀತಾದರೂ ಎಂದು ? ಪ್ರೇಮಬಂಧನ ಎಂಥಾದ್ದು ಅಂದರೆ ಸಿಲುಕಿದರೊಮ್ಮೆ ಬಿಡುಗಡೆಯೇ ಇಲ್ಲ ಎಂದಿಗೂ ; ನಿನ್ನ ನೌಕರಿಯ ಖಾತರಿ ಆದರೂ ಏನು ಇವತ್ತು ಸಿಗಬಹುದು ನಾಳೆ ಕೈತಪ್ಪಬಹುದು !
ಸಾರ್ತ್ರ್‍ ನ ’ಪದಚರಿತ’ - ಓದಿನ ಗೀಳು , ಬರಹದ ಗೋಳು . --------------------------------------------------- ( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳು ಬಹಳ - ಶ್ರೀಕಾಂತ ಮಿಶ್ರೀಕೋಟಿ) ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ . ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ. ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು ಮೌಲ್ಯಮಾಪನ. ಇದನ್ನು ಅನುವಾದ ಮಾಡಿದವರು ರಾಜಕಾರಣಿ ಕೆ. ಎಚ್. ಶ್ರೀನಿವಾಸರು . ಸುಮಾರು ಮೂರ್ನಾಲ್ಕು ವರ್ಷ ತಮ್ಮ ರಾಜಕಾರಣದ ನಡುವೆ ಶ್ರಮಿಸಿದ್ದಾರೆ . ಪುಸ್ತಕವನ್ನು ಮೂಲದಲ್ಲಿ ಅರ್ಥ ಮಾಡಿಕೊಳ್ಳುವದೇ ಕಷ್ಟ ; ಪುಸ್ತಕ ಅಂತಹದು ; ಅಂಥದ್ದನ್ನು ಕನ್ನಡಕ್ಕೆ ಬಹಳ ಶ್ರಮಪಟ್ಟು ತಂದಿದ್ದಾರೆ . ಸಾರ್ತ್ರ್‍ ತನ್ನ ಐವತೊಂಭತ್ತನೇ ವಯಸ್ಸಿನಲ್ಲಿ ಪುನರ್ ಗ್ರಹಿಸಿದ ಬಾಲ್ಯದ ಕತೆ ಇದು . ಅವನು ಚಿಕ್ಕಂದಿನಲ್ಲಿದ್ದಾಗ ಅವನಿಗೆ ಜಾಣತನ , ಲೇಖಕತನ , ಒಳ್ಳೆಯತನವನ್ನು ಹೊರಿಸಲಾಯಿತು . ಅದರ ವಿವರಗಳು , ಓದು , ಬರಹದ ಗೀಳು , ಗೋಳು ಇಲ್ಲಿದೆ . ಇಲ್ಲಿನ ವಾಕ್ಯಗಳನ್ನು ಅವಸರದಲ್ಲಿ ಓದಿ ತಿಳಿಯಲಾಗುವದಿಲ್ಲ . ಇಲ್ಲಿನ ವಾಕ್ಯಗಳ ರೀತಿಯೇ ಅದ...
ಕನ್ಫ್ಯೂಷಿಯಸ್ - ೧ -- ಇತರರು ನನ್ನನ್ನು ತಿಳಿಯಲಿಲ್ಲ ಎಂದು ನಾನು ದುಃಖಿಸುವದಿಲ್ಲ . ನಾನು ಇತರರನ್ನು ತಿಳಿದುಕೊಳ್ಳಲಿಲ್ಲ ಎಂಬುದು ನನ್ನ ದುಃಖ. -- ಸಾಹಿತ್ಯದ ಅಭ್ಯಾಸದಲ್ಲಿ ನಾನು ಯಾರ ಸಮಕ್ಕಾದರೂ ಬಂದೇನು. ಆದರೆ ಉತ್ತಮಪುರುಷನು ಬದುಕುತ್ತಿರುವಂತೆ ಬದುಕುತ್ತಿರುವೆನೇ ಎಂದರೆ ನನಗೆ ಅದು ಸಾಧ್ಯವಾಗಿಲ್ಲವೆಂದೇ ತೋರುತ್ತದೆ. -- ನನ್ನ ನಡತೆಯನ್ನು ಎಲ್ಲಿ ಉತ್ತಮಗೊಳಿಸುವದಕ್ಕೆ ಮರೆತೇನೋ , ನನ್ನ ವ್ಯಾಸಂಗದಲ್ಲಿ ಎಲ್ಲಿ ನಾನು ಪ್ರಮತ್ತನಾದೇನೋ, ಸರಿಯಾದ ದಾರಿ ಕಂಡಾಗ ಎಲ್ಲಿ ನಾನು ಮುಂದುವರೆಯದೆ ನಿಂತೇನೋ, ಮಾಡಿದ ತಪ್ಪು ಗೋಚರವಾದಾಗ ಎಲ್ಲಿ ತಿದ್ದಿಕೊಳ್ಳದೆ ಹೋದೇನೋ ಎಂಬುದೇ ನನ್ನ ಮನಸ್ಸನ್ನು ಸದಾ ಕೊರೆಯುವ ಚಿಂತೆ. --ಮೂರು ಜನ ಒಟ್ಟಿಗೆ ಹೋಗುತ್ತಿದ್ದರೆ , ನಾನು ಎಲ್ಲಿ ಇಬ್ಬರು ಗುರುಗಳನ್ನು ಪಡೆಯಬಲ್ಲೆ.ಒಳ್ಳೆಯವನನ್ನು ಆರಿಸಿಕೊಂಡು ಅವನ ಉದಾಹರಣೆಯನ್ನು ಅನುಸರಿಸಲೆತ್ನಿಸುತ್ತೇನೆ. ಕೆಟ್ಟವನನ್ನು ಆರಿಸಿಕೊಂಡು ಆ ತಪ್ಪು ನನ್ನಲ್ಲಿ ಇಲ್ಲದಂತೆ ಮಾಡಲು ಯತ್ನಿಸುತ್ತೇನೆ. -- ಸತ್ಯವಂತನಿಗೆ ಚಿಂತೆಯಿಲ್ಲ . ಧೈರ್ಯಶಾಲಿಗೆ ಭಯವಿಲ್ಲ . ಜ್ಞಾನಿಗೆ ಸಂಶಯವಿಲ್ಲ. -- ನಾನು ತುಂಬ ಕಲಿತು ಎಲ್ಲವನ್ನು ನೆನಪಿನಲ್ಲಿದಲು ಪ್ರಯತ್ನಿಸಿದೆ ಎಂದು ತಿಳಿದಿದ್ದೀಯಾ ? ಇಲ್ಲ . ಆ ಎಲ್ಲವನ್ನು ಪೋಣಿಸಿ ಒಂದು ದಾರದಂತೆ ಹಿಡಿದಿಡುವ ಒಂದು ಕ್ರಮವಿದೆ , ದಾರಿಯಿದೆ. -- ಕಷ್ಟ ಉತ್ತಮನಿಗೆ ಬರಬಹುದು. ಆದರೆ ಹೀನನಾದವನು ಆ ಕಾರಣವಾಗಿ ನಡತೆಕೆಡುತ್ತ...
ತತ್ವಜ್ಞಾನಿ ಮತ್ತು ಒಣರೊಟ್ಟಿ ತತ್ವಜ್ಞಾನಿಯೊಬ್ಬ ಒಣರೊಟ್ಟಿ ತಿನ್ನುತ್ತಾ ಕೂತಿದ್ದ . ಆಗ ಅವನ ಬಳಿ ಒಬ್ಬ ರಾಜಕುಲದವನು ಹಾದುಹೋದ. ತತ್ವಜ್ಞಾನಿ ಅವನಿಗೆ ಹೆಚ್ಚು ಗಮನಕೊಡದೆ , ಗೌರವ ಸೂಚಿಸದೆ ತನ್ನಷ್ಟಕ್ಕೆ ತಾನಿದ್ದ . ಅವನ ಸ್ನೇಹಿತ ಹಾಗೆ ಮಾಡದೆ ಆ ಪ್ರಮುಖವ್ಯಕ್ತಿಯನ್ನು ವಂದಿಸಿದ. ತತ್ವಜ್ಞಾನಿಗೆ ಸ್ನೇಹಿತ ಹೇಳಿದ . ' ನೀನು ಅವರಿಗೆ ಸ್ವಲ್ಪ ಗೌರವ ಸೂಚಿಸಿದ್ದರೆ , ನಿನಗೆ ಒಣರೊಟ್ಟಿ ತಿಂದು ನೀರು ಕುಡಿದು ಇರುವ ದುರ್ಗತಿ ಬರುತ್ತಿದ್ದಿಲ್ಲ' . ಆಗ ತತ್ವಜ್ಞಾನಿ ಹೇಳಿದ. -' ಒಣರೊಟ್ಟಿ ತಿಂದು ನೀರು ಕುಡಿದು ಇರುವದು ಹೇಗೆಂದು ನಿನಗೆ ಗೊತ್ತಿದ್ದರೆ ನಿನಗೆ ಈ ದುರ್ಗತಿ ಬರುತ್ತಿದ್ದಿಲ್ಲ' .
ಕಥೆಗಳ ಕುರಿತು ಕಥೆಯಾಗಿಸಿಕೊಳ್ಳದೆ ನಾವು ಏನನ್ನೂ ಗ್ರಹಿಸಲಾರೆವು, ಅರ್ಥ ಮಾಡಿಕೊಳ್ಳಲಾರೆವು. ಬದುಕು ಎಷ್ಟು ವಿಶಾಲ, ಅಸಂಗತ, ಅತಾರ್ಕಿಕ ಎಂದರೆ ಅದಕ್ಕೆ ಅರ್ಥ, ತರ್ಕ, ಸುಸಂಗತತೆ ನೀಡುವ ಸಲುವಾಗಿಯೇ ಮನುಷ್ಯ ಕಥೆಯ ಕಲೆಯನ್ನು ಕಟ್ಟಿಕೊಂಡಿದ್ದಾನೆ --olnswamy
ಕೆಲ ಹಾಯ್ಕುಗಳು olnswamy ಅವರು ಅನುವಾದಿಸಿರುವ ಕೆಲ ಹಾಯ್ಕುಗಳು: ಹಾಯ್ಕು ಜಪಾನಿನ ಸಾಹಿತ್ಯದ ಒಂದು ವಿಶಿಷ್ಟ ಕವಿತಾ ರೂಪ. ಈ ಜಗತ್ತಿನಲ್ಲಿ ನಾವು ಹೂಗಳನ್ನು ದಿಟ್ಟಿಸುತ್ತಾ ನಡೆಯುತ್ತೇವೆ ನರಕದ ಚಾವಣಿಯ ಮೇಲೆ ಹಗಲೂ ಇರುಳೂ ಬುದ್ಧನನ್ನು ನೆನೆಯುತ್ತಾ ಸೊಳ್ಳೆಗಳನ್ನು ಕೊಲ್ಲುತ್ತಾ ಬದುಕಿದ್ದೇನೆ. ಮಧ್ಯಾಹ್ನ ಮಲಗಿಕೊಂಡು ರಸ್ತೆ ರಿಪೇರಿಯವರ ಗದ್ದಲ ಕೇಳಿಸಿಕೊಳ್ಳುತ್ತಾ ನಾಚಿಕೊಳ್ಳುತ್ತಾ ಇದ್ದೇನೆ. ಹೊಸ ವರುಷದ ದಿನ ಎಲ್ಲವೂ ಅರಳಿವೆ ನಾನು ಮಾತ್ರ ಸಾಮಾನ್ಯವಾಗಿಯೇ ಇರುವೆ. ಈ ನಮ್ಮ ಲೋಕದಲ್ಲಿ ತಿನ್ನುವುದು ಅಮೇಧ್ಯವಾಗಲೆಂದು ಮಲಗುವುದು ಎಚ್ಚರವಾಗಲೆಂದು ಎಲ್ಲದರ ಕೊನೆಗೆ ಸುಮ್ಮನೆ ಬರುವುದು ಸಾವು ನಿಶ್ಚಲವೆಂದರೆ ಇದೇ ಬಿರು ಬಿಸಿಲಲ್ಲಿ ಬಂಡೆಗೆ ಅಪ್ಪಳಿಸುವ ಮರಕುಟಿಗನ ಸದ್ದು
ಕನ್ನಡದ ದೀಪ ಶಕ್ತಿಮೂಲವು ನಿನಗೆ ಕನ್ನಡದ ಪ್ರೇಮ ಕನ್ನಡಿಗ ನೀನಾಗು ಕನ್ನಡದ ಭೀಮ ನೀನಾಗು ಕನ್ನಡದ ತೇಜ ಸ್ವರೂಪ ಕನ್ನಡಿಗರೆದೆ ಬೆಳಗೆ ಕನ್ನಡವೇ ದೀಪ ಹೊತ್ತಿತೋ ಹೊತ್ತಿತು ಕನ್ನಡದ ದೀಪ ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ ಹರ್ಷ ಉಕ್ಕಿಸುವಂತೆ ಶೋಭಾಯಮಾನ ಕನ್ನಡದ ಮನೆಯಾಗೆ ಜ್ಯೋತಿರ್ನಿಧಾನ ಕನ್ನಡದ ಮಾನ , ಕನ್ನಡದ ಪ್ರಾಣ ಉರಿವವರು ಬೇಕಿನ್ನು ಇದರೆಣ್ಣೆಯಾಗಿ ಸುಡುವವರು ಬೇಕಿನ್ನು ನಿಡುಬತ್ತಿಯಾಗಿ ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ ಚಿರಕಾಲ ಬೆಳಗಲಿ ಕನ್ನಡದ ದೀಪ ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ ಭಾರತಕೆ ಬಲವಾಗಿ ಭವ್ಯ ಪ್ರದೀಪ ಕಳೆಯುತ್ತ ತಾಪ , ಬೆಳೆಸುತ್ತ ಸೈಪ ---- ರಚನೆಕಾರರು - ಸಿದ್ಧಲಿಂಗಯ್ಯ ಈ ಹಾಡನ್ನು ಕನ್ನಡದ ನಟಸಾರ್ವಭೌಮ ರಾಜಕುಮಾರ್ ಅವರ ಜೇನಿನಂತಹ ದನಿಯಲ್ಲಿ ' ಕನ್ನಡವೇ ಸತ್ಯ ' ಕ್ಯಾಸೆಟ್ಟಿನಲ್ಲಿ(ಧ್ವನಿಸುರಳಿಯಲ್ಲಿ ) ಕೇಳಿ ಆನಂದಿಸಿ .