Posts

http://nannakanda.blogspot.com/ ಬ್ಲಾಗಿಷ್ಟರಿಂದ ಆಮಂತ್ರಿತರಿಗೆ ಮಾತ್ರ ; ಎಲ್ಲರಿಗೂ ಅಲ್ಲ http://suvarnaangala.blogspot.com/ ಸಂಪದಿಗರಾದ ಚಾಮರಾಜ ಸವಡಿ ಅವರು ಬರೆದ ಕಚೇರಿ ವಾತಾವರಣದ ಬಗೆಗಿನ ಕೆಲವು ಬರಹಗಳು , ಶ್ರೀದೇವಿ ಕಳಸದ ಅವರ ಕೆಲವು ಕವನಗಳು ಇಲ್ಲಿವೆ . ಒಂದು ವರ್ಷದಿಂದ ಏನೂ ಸೇರ್ಪಡೆ ಇಲ್ಲ . http://anchemane.blogspot.com/ ಆದರ್ಶ ಅಂಚೆ ಅನ್ನುವವರ ಮನೆ ಇದು . ತೂತ್ ಕಂಡೀಶನ್ ಬಸ್ಸು ಒಂದೇ ಬರಹ ಇದೆ . ಎರಡು ವರ್ಷ ಹಿಂದಿನದ್ದು. ( ನಾನು ಹೀಗೆಲ್ಲ ಬರೀತ ಹೋದರೆ ಮಲಗಿರುವ ಒಂದಿಷ್ಟು ಬ್ಲಾಗುಗಳು ಮತ್ತೆ ಎದ್ದಾವು ! ಅದೂ ಒಂಥರ ಅಳಿಲುಸೇವೆ ನನ್ನಿಂದ !!) http://antaranga.blogspot.com/ ಇಲ್ಲಿ ಮುನ್ನೂರಕ್ಕೂ ಹೆಚ್ಚು ಬರಹಗಳು ಇವೆ ... ತಡೀರಿ ಎಲ್ಲ ನೋಡಿ ಬರೀತೀನಿ!!
ಕನ್ನಡಬಲ (http://www.kannadabala.blogspot.com/) ಇದು ಕನ್ನಡಾಭಿಮಾನಿ ರೋಹಿತ್ ರಾಮಚಂದ್ರಯ್ಯ ಅವರ ಬ್ಲಾಗು . ಇಲ್ಲಿ ೭೦೦ ಕನ್ನಡ ಬ್ಲಾಗುಗಳು , ಕನ್ನಡ ತಾಣಗಳು, ಸುದ್ದಿ ತಾಣಗಳು , ಪೋರ್ಟಲ್ ಗಳು, ದ್ವಿಭಾಷಾ ತಾಣಗಳು , ಆಂಗ್ಲ ತಾಣಗಳು ಗಳ ಕೊಂಡಿಗಳು ಸಿಗುತ್ತವೆ !!
ಕನ್ನಡ ಬ್ಲಾಗುಲೋಕದಲ್ಲಿ ವಿಹಾರ kannadabala.blogspot.com ಎಂಬ ಬ್ಲಾಗಿನಲ್ಲಿ ಕನ್ನಡ ಬ್ಲಾಗ್ ಗಳ ಪಟ್ಟಿಯೇ ಸಿಕ್ಕಿತು . ಸರಿ ಎಲ್ಲ ಜಾಲಾಡೋಣ ಅಂತ ಹೊರಟೀನಿ . ಅಲ್ಲಿ ಏನೇನಿದೆ ನೋಡೋಣ .. ವಿಶೇಷ ಕಂಡದ್ದನ್ನು ತಿಳಿಸ್ತೀನಿ .... ಇದೋ ಶುರು ಕನ್ನಡಬಲದಿಂದಲೇ !!!!
ಗೋಳಾಟ ಅಯ್ಯೋ, ನಾನು ಧಡ್ಡನಾದೆನು ಅಯ್ಯೋ, ನನ್ನ ತಲೆಯು ಓಡಲೊಲ್ಲದು ಅಯ್ಯೋ, ನನಗೆ ಕೆಲಸ ಇಲ್ಲವು ಅಯ್ಯೋ, ನನಗೆ ಕೆಲಸ ಮಾಡುವ ಮನಸೂ ಇಲ್ಲವು ! ಅಯ್ಯೋ, ನನಗೆ ಹೇಳುವರಾರೂ ಇಲ್ಲವು ಅಯ್ಯೋ, ನನಗೆ ಕೇಳುವರಾರೂ ಇಲ್ಲವು ಅಯ್ಯೋ, ನಾನು ಏನೂ ಸಾಧಿಸಲಿಲ್ಲವು ಅಯ್ಯೋ, ನಾನು ಏನೂ ಸಾಧಿಸುತಿಲ್ಲವು ಅಯ್ಯೋ, ನನಗೆ ಏನೂ ಸಾಧಿಸಲಿಕ್ಕಿಲ್ಲವು ಅಯ್ಯೋ, ನನಗೆ ಸಮಾಧಾನ ಇಲ್ಲವು ಅಯ್ಯೋ, ನಾನು ಏನೂ ಕಲಿಯುತಿಲ್ಲವು ಅಯ್ಯೋ, ನನಗೆ ಏನೂ ತೋಚುತಿಲ್ಲವು ಅಯ್ಯೋ, ಇನ್ನೆರಡು ಸಾಲು ಹೊಳೆಯುತಿಲ್ಲವು ಅರೆ , ಅಂತೂ ಈ ಹಾಡನ್ನು ಪೂರ್ತಿಗೊಳಿಸಿದೆನು !
http://www.youtube.com/watch?v=mL6Sc9SU5jE ಇಲ್ಲಿ ’ಛೋಟೀ ಛೋಟೀ ಸೀ ಬಾತ್’ ಎಂಬ ಹಿಂದಿ ಚಿತ್ರದ ಹಾಡೊಂದಿದೆ . ಹಿಂದೆ ಕೇಳಿರದಿದ್ದರೆ ಈಗ ಕೇಳಿ . ಈ ಹಾಡನ್ನು ಅನುವಾದಿಸಲು ಹವಣಿಸಿದ್ದೇನೆ . ಸಾಧ್ಯವಾದಷ್ಟು , ಮೂಲದ ಲಯ , ಧಾಟಿಯನ್ನು ಇಟ್ಟುಕೊಂಡಿದ್ದೇನೆ. ಹೀಗೇತಕೋ ಆಗೋದು ಬದುಕಲಿ ನಾನರಿಯೆನೂ ! ಹೋದ ಮೇಲೆ ಯಾರೋ ಕಾಡೋದು ನೆನಪು ಅವರದೂ , ಸಣ್ಣ ಸಣ್ಣವೇ ವಿಷಯಾ ! ಅರಿವಿಲ್ಲದೆ ಕಳೆದ ಕ್ಷಣಗಳೂ , ಬಣ್ಣ ಬದಲಿಸಿ ಕ್ಷಣಾ ಕ್ಷಣಾ , ಮನಸಿಗೇ ತಲ್ಲಣಾ , ಹೆದರಿಕೆ ತುಂಬುತಾ , ಸಜ್ಜುಗೊಳ್ಳದೇ ಒಡೆದು ಹೋಯಿತೇ , ಅಯ್ಯೋ , ನನ್ನ ಕನಸಿನರಮನೆ ? ಅದೇ ಹಾದಿಯೂ , ಅಲ್ಲೇ ನಡಿಗೆಯೂ , ಆದರೆ ಇಲ್ಲ ನನ್ ಜತೇ , ನನ್ ಜತೆ ನಡೆವಾತನೂ , ಹುಡುಕಿವೆ ಅವನನೂ ಅತ್ತ ಇತ್ತ ಕಂಗಳೂ ... ಕಳೆದುಕೊಂಡೆನೇ ಆ ಸಂಜೆ ಸುಮಧುರ ? ಆ ನನ್ನ ದಿನಗಳ , ಆ ನನ್ನ ಅವನನು ?
ವೀರ್ ಝಾರಾ ಚಿತ್ರದ ... ತೇರೇಲಿಯೇ ಹಂ ಹೈ ಜಿಯೇ ಹರ ಆಂಸೂ ಪಿಯೇ ... ಹಾಡಿನ ಅನುವಾದ ಪ್ರಯತ್ನ ... ನಿನಗಾಗಿಯೇ ನಾ ಬದುಕಿಹೆ ಕಣ್ಣೀರನೇ ಕುಡಿಯುತ, ಆದರೂನು ಆರದು ಬಯಕೆಯ ಬೆಂಕಿಯು, ನಿನಗಾಗಿಯೇ ನಾ ಬದುಕಿಹೆ ಹೊಲ್ ಕೊಂಡು ತುಟಿಗಳ ( :) ) ಬದುಕಿದು ತಂದು ಇತ್ತಿತು ಕಳೆದ ದಿನಗಳ ಪುಸ್ತಕ, ಈಗ ನಮ್ಮನು ಮುತ್ತಿವೆ ಆ ದಿನಗಳ ನೆನಪುಗಳು, ಕೇಳದೆಯೇ ದೊರಕಿವೆ ಎನಿತೊಂದು ಉತ್ತರ, ಬಯಸಿದೆವು ಏನನು , ಪಡೆದೆವು ಏನನ ನಾವು , ನೋಡಿರಿ ಜಗವಿದು ನಮ್ಮೊಂದಿಗೆ ಸಾಧಿಸಿತು ವೈರವ ..?....?......?... ............. ............. ............ ( ಇಲ್ಲಿನ ಸಾಲುಗಳು ಸರಿಯಾಗಿ ಸಿಕ್ಕಿಲ್ಲ ) ಲೋಕವು ನಿಷ್ಕಾರಣ ದ್ವೇಷವ ಮಾಡಿತು ...
ವಿಶ್ವೇಶ್ವರಯ್ಯ , ಭೀಮಸೇನ್ ಜೋಶಿ , ಮಹಾರಾಷ್ಟ್ರ ಟೈಮ್ಸ್ ಹದಿನೈದು ದಿನದ ಹಿಂದೆ ಮಹಾರಾಷ್ಟ್ರ ಟೈಮ್ಸ್ ಹೆಸರಿನ ಮರಾಠಿ ಪತ್ರಿಕೆ( ಇದು ಟೈಮ್ಸ್ ಬಳಗದ್ದು)ಯಲ್ಲಿ ವಿಶ್ವೇಶ್ವರಯ್ಯ ಕುರಿತು ಪುಟಗಟ್ಟಲೆ ಬಂದಿತ್ತು . ಪತ್ರಿಕೆ ಕೈಗೆ ಸಿಗಲಿಲ್ಲ . ಸಿಕ್ಕಿದ್ದರೆ ಕಮಕಮ ಅಂತ ಓದಿ ಏನು ಬರೆದಿದ್ದಾರೆ ಅಂತ ತಿಳ್ಕೋಬಹುದಿತ್ತು . ಮೊನ್ನೆ ಭೀಮಸೇನ್ ಜೋಶಿಯವರಿಗೆ ಭಾರತರತ್ನ ಸಿಕ್ಕಿದ್ದು ಇವತ್ತು ಇಂಗ್ಲೀಷ್ ಟೈಮ್ಸ್ ಗಮನಕ್ಕೆ ಬಂದಿದೆ ! .. ನಿನ್ನೆಯಂತೂ ಯಾವ ಇಂಗ್ಲೀಷ್ / ಹಿಂದಿ ಚಾನೆಲ್ ಗೂ ಇದು ಸುದ್ದಿಯಾಗಲೇ ಇಲ್ಲ ; ಒಂದು ಚಾನೆಲ್ ಸುದ್ದಿ ತೋರಿಸಿತಾದರೂ ಅವರ ಹತ್ರ ಯಾವ್ದೇ ಕ್ಲಿಪ್ಪಿಂಗ್ ಇರಲಿಲ್ಲ ; ಹಾಗಾಗಿ ಅವರು ಇಡೀ ಭಾರತ್ ದೇಶಂ ಹಾಡೋ ಅಥವಾ ಇನ್ನಾವ್ದೋ ತೋರಿಸಿದ್ರು ! ಇವತ್ತಿನ ಮಹಾರಾಷ್ಟ್ರ ಟೈಮ್ಸ್ ಕೈಯಲ್ಲಿದೆ . ಒಂದು ಇಡೀ ಪುಟದಷ್ಟು ಬೀಮಸೇನ್ ಜೋಶಿ ಬಗ್ಗೆ ಇದೆ . ಪು.ಲ. ದೇಶಪಾಂಡೆ ಅವರ ಸಂದರ್ಶನವೂ ಇದೆ . ನಿನ್ನೆಯ ಪತ್ರಿಕೆಯಲ್ಲೂ ಅವರ ಬಗ್ಗೆ ಬಹಳ ಬಂದಿತ್ತಂತೆ . ಮುಖಪುಟದ ತಲೆಬರಹ ಅಂತೆ . ಓದಲಿಕ್ಕೆ ಪ್ರಯತ್ನ ಮಾಡ್ತಾ ಇದ್ದೀನಿ . ಸಂಪಾದಕೀಯದಲ್ಲಿ ಹೀಗೆ ಬರೆದಿದ್ದಾರೆ . ... ಇವರು ಮಹಾರಾಷ್ಟ್ರದವರಲ್ಲ ಎಂದು ಕೆಲವರು ಆಕ್ಷೇಪ ಮಾಡುವರಾದರೂ , ಪಂಡರಾಪುರದ ವಿಟ್ಠಲ ಎಷ್ಟು ಮಹಾರಾಷ್ಟ್ರೀಯನೋ ಅಷ್ಟೇ ಭೀಮಸೇನ್ ಜೋಷಿ ಕೂಡ ಮಹಾರಾಷ್ಟ್ರದವರು. ..( ಪಂಡರಾಪುರದ ವಿಟ್ಠಲನ ಕುರಿತಾದ ಪ್ರಸ್ತಾಪ ಗಮನಿಸಿದಿರಿ ತಾನೇ...
ಕನಕದಾಸರು ಮತ್ತು ಗೌರವ, ಪ್ರಶಸ್ತಿಯ ಆಸೆ. ಮಾಸ್ತಿಯವರು ಕನಕದಾಸರ ಕುರಿತು ಬರೆಯುವಾಗ ಹೀಗೆ ಬರೆದಿದ್ದಾರೆ . "ಕುರುಬ ವಂಶದಲ್ಲಿ ಜನಿಸಿ ತಮ್ಮ ಪಾಳೆಯಪಟ್ಟನ್ನು ಕೆಲವುಕಾಲ ಆಳಿ ಆಮೇಲೆ ಹರಿದಾಸನ ಪದವಿಗೇರಿದ ಕನಕದಾಸರು ತಮ್ಮ ಬಾಳಿನ ರೀತಿಯಿಂದ ತಮ್ಮ ಗುರು ವ್ಯಾಸರಾಯರಿಗೆ ಮೆಚ್ಚುಗೆಯ ಶಿಷ್ಯರಾದರು . ದ್ವಿಜರಾದ ಗುರು , ದ್ವಿಜವಂಶದವನಲ್ಲದ ಈ ಶಿಷ್ಯ ತಮಗಿಂತ ಹೆಚ್ಚಿನ ಸಿದ್ಧಿಯನ್ನು ಪಡೆದಿರುವ ದೈವಭಕ್ತ ಎಂದು ಇವರನ್ನು ಹೊಗಳುತ್ತಿದ್ದರಂತೆ . ವ್ಯಾಸರಾಯರು ಕನಕದಾಸರು ತಮಗಿಂತ ಹಿರಿಯರೆಂದು ಹೊಗಳಿದರೂ ಕನಕದಾಸರು ತಾವು ಗುರುವಿನ ಪೀಠದಲ್ಲಿ ಕುಳಿತೇನು ಎಂದು ಮುಂದರಿಯಲಿಲ್ಲ. ಈ ನಡತೆಯ ರಹಸ್ಯ ಏನು ಎಂದು ಆಧುನಿಕರಾದ ನಾವು ವಿಚಾರ ಮಾಡಬೇಕು. " ಇಲ್ಲಿನ "ರಹಸ್ಯ" ಏನೆಂದು ನನಗೆ ತಿಳಿಯಲಿಲ್ಲ ; ( ನಿಮಗೆ ಗೊತ್ತಿದ್ದರೆ ಅಥವಾ ತೋಚಿದರೆ ತಿಳಿಸಿ ) . ಆದರೆ ಇಂಥ ಜನ ನಮ್ಮ ನಡುವೆ ಇದ್ದಾರೆ , ಅರ್ಹತೆಯಿದ್ದೂ ಪ್ರಶಸ್ತಿ,ಗೌರವ ಬಯಸದೆ "ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ ? " ಎಂದು ಹಾಡಿಕೊಂಡು ಇರುವವರು . ಇಂಥವರೇ ಈ ರಹಸ್ಯವನ್ನು ತಿಳಿಹೇಳಿದರೆ ಬಲು ಚೆನ್ನು.
ಜೀವನಕಲೆ ಕರ್ಣಾಟಕದ ಕಲೆ ಎಂಬ ಲೇಖನದಲ್ಲಿ ಮಾಸ್ತಿಯವರು ಹೀಗೆ ಬರೆದಿದ್ದಾರೆ ಬಹುಕಾಲ ಬದುಕಬೇಕು. ತುಂಬ ಸುಖಪಡಬೇಕು. ಜೊತೆಯ ಜೀವನಗಳನ್ನು ಆದಷ್ಟು ಸುಖ ಪಡಿಸಬೇಕು ಎನ್ನುವುದು ಜೀವನದ ಆಳದಲ್ಲಿರುವ ಆಸೆ , ಹಂಬಲಿಕೆ ; ಮನುಷ್ಯನ ಇತಿಹಾಸವೆಲ್ಲ ಇದರಿಂದ ಬೆಳೆದಿದೆ. ಕನ್ನಡದ ಜನ ಈ ಉನ್ನತಿಯನ್ನ ಸಾಧಿಸಿದ್ದಾರೆ. ಸ್ವಚ್ಛತೆ , ಅಲಂಕಾರ , ರಂಗೋಲಿ , ಹಾಡು , ಸಂಗೀತ , ನೃತ್ಯ , ಶಿಲ್ಪಕಲೆ , ಬಯಲಾಟ, ಯಕ್ಷಗಾನ, ಹಬ್ಬಹುಣ್ಣಿವೆ , ಜಾತ್ರೆ , ಪೂಜೆ ಪುನಸ್ಕಾರ / ಇತ್ಯಾದಿ .
ಕನ್ನಡ ಶಬ್ದ ಸಂಪತ್ತು ಕುರಿತು ಮಾಸ್ತಿ. ಕನ್ನಡಕ್ಕೆ ಆಗಿಬಂದ ಸಂಸ್ಕೃತ ಪದ ಕನ್ನಡದ ಸ್ವತ್ತೇ . ಅದನ್ನು ಬಳಸಲು ಹಿಂದೆಗೆಯುವುದು ಭಾಷೆಯನ್ನರಿಯದವನ ಲಕ್ಷಣ. ಕನ್ನಡದಲ್ಲಿ ಶಬ್ದಗಳಿಲ್ಲದಿರುವದರಿಂದ ಈ ವಿಷಯ ಆ ವಿಷಯವನ್ನು ಹೇಳಲಾಗುವದಿಲ್ಲ ಎನ್ನುವುದು ನಮ್ಮಲ್ಲಿ ಕೆಲವರ ಅಭಿಪ್ರಾಯ. ಇದು ಕನ್ನಡವನ್ನು ಕಲಿಯದೆ ಅದರ ವಿಚಾರವನ್ನು ಮಾತನಾಡುವುದರ ಫಲ. ರತ್ನಾಕರನು ಕನ್ನಡದಲ್ಲಿ ಜೀವನ , ಮೋಕ್ಷ, ರಾಷ್ಟ್ರ , ಸಂಸಾರವನ್ನು ಕುರಿತ ಎಷ್ಟು ಗಹನವಾದ ವಿಷಯಗಳನ್ನು ಎಷ್ಟು ಸುಲಭವಾದ ಪದಗಳಿಂದ ನಿರೂಪಿಸಿದ್ದಾನೆನ್ನುವುದನ್ನು ನೋಡಿದವರು ಕನ್ನಡವನ್ನು ಕುರಿತು ಈ ಹೀನಾಯವನ್ನು ನುಡಿಯಲಾರರು. ಮಹಾಕವಿ ಕಾವ್ಯವನ್ನು ರಚಿಸಿದ್ದು ಸಾರ್ಥಕವಾಗಬೇಕಿದ್ದರೆ ಅವನ ಶಬ್ದ ಸಂಪತ್ತು , ಅದರ ಹಿಂದಿನ ಭಾವ ಸಂಪತ್ತು ಎಲ್ಲ ಕಿರಿಯರಿಗೆ ಸಿದ್ಧಿಸಬೇಕು. ಅದಾಗದಿದ್ದರೆ ತಾಯಿ ಅಡುಗೆ ಮಾದಿತ್ತು ಮಕ್ಕಳು ಉಣ್ಣದಂತೆ ; ಅಡುಗೆ ಮಾಡಿದ ಶ್ರಮ ವ್ಯರ್ಥ. ಮಾಡಿದ ಜೀವಕ್ಕೆ ತೃಪ್ತಿಯಿಲ್ಲ; ಮಕ್ಕಳ ಹಸಿವಂತೂ ಹಾಗೆಯೇ ಉಳಿಯುವುದು.
ಕಾಳಿದಾಸನು ಸರಸ್ವತಿಗೆ ಬೈದನೇ ? ಅದೂ ಏನೆಂದು? ನಾನು ಮಾಸ್ತಿಯವರ ಒಂದು ಪುಸ್ತಕ ಓದುವಾಗ ಈ ವಿಷಯ ಕಣ್ಣಿಗೆ ಬಿತ್ತು. ಒಮ್ಮೆ ಕಾಳಿದಾಸ ದಂಡಿ ಇವರಲ್ಲಿ ಯಾರ ಕವಿತೆ ಶ್ರೇಷ್ಠ ಎಂದು ಪ್ರಶ್ನೆ ಬಂದಿತು. ಇದನ್ನು ನಿರ್ಣಯಿಸುವದಕ್ಕೆ ಯಾರಿಗೂ ಧೈರ್ಯವಿಲ್ಲ. ಸರಸ್ವತಿಯನ್ನು ಕೇಳೋಣ ಎಂದು ಒಪ್ಪಿದರು . ದೇವಿ ಪ್ರತ್ಯಕ್ಷವಾದಾಗ ದಂಡಿ ಒಂದು ಶ್ಲೋಕವನ್ನು ಹೇಳಿದನು. ಕಾಳಿದಾಸ ಒಂದು ಶ್ಲೋಕವನ್ನು ಹೇಳಿದನು. ಶ್ಲೋಕ ಯಾವುವು ಈಗ ನಮಗೆ ಗೊತ್ತಿಲ್ಲ. ಶ್ಲೋಕಗಲನ್ನು ಹೇಳಿದ ಮೇಲೆ ಕವಿಗಳು ತೀರ್ಪನ್ನು ಬೇಡಿ ಕೈ ಮುಗಿದು ನಿಂತರು. ದೇವಿ , "ಕವಿರ್ದಂಡೀ, ಕವಿರ್ದಂಡೀ , ನಸಂಶಯಃ " ಎಂದಳು . ದಂಡಿಗೆ ಸಂತೋಷ ಆಯಿತು. ಅವನು ಹೆಮ್ಮೆಯಿಂದ ಕಾಳಿದಾಸನ ಕಡೆ ನೋಡಿದನು. ಕಾಳಿದಾಸನಿಗೆ ಅಸಾಧ್ಯ ಕೋಪ ಬಂದಿತು. ಅವನು "ಹೇ ರಂಡೇ ಅಹಂ ಕೋವಾ " ( ಹಾಗಾದರೆ ನಾನು ಯಾರು?) ಎಂದು ಕೇಳಿದನು . ದೇವಿ "ತ್ವಮೇವಾಹಂ,ತ್ವಮೇವಾಹಂ, ತ್ವಮೇವಾಹಂ, ನಸಂಶಯಃ " ಎಂದಳು ; ಮರೆಯಾದಳು. ಕಾಳಿದಾಸ ಎಲ್ಲ ಕವಿಗಳಿಗಿಂತ ಹೆಚ್ಚು ಎಂದು ಕವಿ ಸಮುದಾಯ ಒಪ್ಪಿತು.
ಮುಂಬೈ, ಎಂತಹ ಐಡಿಯಾ ! ನೀವು ಇತ್ತೀಚೆಗೆ ಮುಂಬೈ ನಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸ್ತಾ ಇರಬಹುದು . ಅದೇ ಮರಾಠೀ ಭಾಷಿಕರ ಮತ್ತು ಹೊರಗಿನಿಂದ ಬಂದವರ ತಿಕ್ಕಾಟದ ವಿಷಯ . ಇದೇ ಸಮಯಕ್ಕೆ ಐಡಿಯಾ ಎಂಬ ಟೆಲಿಕಾಂ ಸಂಸ್ಥೆ ಮುಂಬೈ ಪ್ರವೇಶಿಸಿದೆ . ಎಲ್ಲೆಡೆ ಅದರ ದೊಡ್ಡ ಹೋರ್ಡೀಂಗ್ ಗಳು ತಲೆಯೆತ್ತಿವೆ - ಅವುಗಳ ವಿಷಯ ಹೀಗೆ ... ಬೇರೆ ಬೇರೆ ಜನರ ಚಿತ್ರಗಳಿವೆ . ಜತೆಗೆ ಇವನು ಪುಣೆಯವನು , ಮುಂಬೈಯವನಲ್ಲ !? ಇವನು ಗುಜರಾತಿನವನು , ಮುಂಬೈಯವನಲ್ಲ !? ಇವನು ಪಂಜಾಬಿನವನು , ಮುಂಬೈಯವನಲ್ಲ !? ...ಇತ್ಯಾದಿ . ಎಂಬ ವಾಕ್ಯಗಳಿವೆ . ಈ ಸರಣಿಯಲ್ಲಿ ಕೊನೆಯದು . ಈ ಪ್ರಶ್ನೆಗೆ ಉತ್ತರ ಎಂಬಂತೆ , ಒಬ್ಬ ಮೊಬೈಲು ಕೈಯ್ಯಲ್ಲಿ ಹಿಡಕೊಂಡು ಹೇಳ್ತಿದ್ದಾನೆ . ನನ್ನ ನಂಬರ್ ಮುಂಬಯಿಯದು , ಆದಕಾರಣ ನಾನು ಮುಂಂಬಯಿಯವನು . ! ಅದಕ್ಕೆ ಒಂದು ಟ್ಯಾಗ್ ಲೈನ್ - ಮುಂಬೈ , ವ್ಹಾಟ್ ಎನ್ ಐಡಿಯಾ ! ಈ ಐಡಿಯಾ ಸಂಸ್ಥೆಯ ಜಾಹೀರಾತುಗಳನ್ನು ನೀವು ಟೀವೀ ಮತ್ತು ಇತರೆಡೆ ನೋಡಿರಬಹುದು . ಎಲ್ಲರೂ ಜಾತಿ ಭಾಷೆ ಇತ್ಯಾದಿಗಳು ಸೂಚಿಸುವ ಹೆಸರುಗಳ ಬದಲಾಗಿ ನಂಬರುಗಳಾಗಿ ಬಿಟ್ಟಿರೋದು , ಅಭಿಷೇಕ್ ಬಚ್ಚನ್ ಇರುವ ಜಾಹೀರಾತುಗಳನ್ನು ನೋಡಿದ್ದೀರಿ ತಾನೇ ?
ನಿನ್ನ ಕಂಗಳ ಹೊರತಾಗಿ ನಿನ್ನ ಕಂಗಳ ಹೊರತಾಗಿ ಜಗತ್ತಿನಲ್ಲಿ ಇರುವದಾದರೂ ಏನು ? ತೆರೆದಾಗ ಇವು ಬೆಳಗು , ಮುಚ್ಚಿದಾಗ ಸಂಜೆ , ನನ್ನ ಬದುಕೂ ಸಾವೂ ಈ ರೆಪ್ಪೆಗಳ ಕೆಳಗೆ ಈ ಕಣ್ಣರೆಪ್ಪೆಗಳ ಸಂದಿನಲ್ಲಿ ವಸಂತ ನಲಿಯುತಿದೆ ನನ್ನ ಕನಸುಗಳು ಇಲ್ಲಿ ಅಲೆಯುತಿವೆ ಈ ಕಂಗಳಲ್ಲಿ ನನ್ನ ಬರಲಿರುವ ದಿನಗಳ ಚಿತ್ರ ಇದೆ ಬಯಕೆಯ ಕಾಡಿಗೆಯಲಿ ಬರೆದ ನನ್ನ ಭಾಗ್ಯವಿದೆ . ( ತೇರೀ ಆಂಖೋಂ ಕೆ ಸಿವಾ ದುನಿಯಾ ಮೆ ರಖಾ ಕ್ಯಾ ಹೈ? ಎಂಬ ಹಿಂದಿ ಸಿನಿಮಾ ಹಾಡಿನ ಅನುವಾದ ಇದು)
ನನ್ನ ಬೆಲೆ ! ಒಂದುದಿನ ಹೆಮ್ಮೆಯಲಿ ನನ್ನವಳಿಗೆ ಹೇಳಿದೆನು- ’ನನ್ನ ಬೆಲೆ ಎಷ್ಟು ಗೊತ್ತೆ ? ... ಲಕ್ಷ’ :) ’ನನ್ನರಸ ಸುಮ್ಮನಿರಿ, ಯಾರಾದರೂ ಕೇಳಿಯಾರು, ನಮ್ಮ ಕೆಲಸದವಳ ಬಳಿ ಅಷ್ಟು ಬೆಲೆಯ ಫ್ಲ್ಯಾಟಿದೆ ’ :( :(
ಅಂತರ್ಜಾಲದಲ್ಲಿರೋ ನವೆಂಬರ್ ೧೯೫೮ ರ ಚಂದಮಾಮದಲ್ಲಿ * ಅತಿಶಯ ತಿರುಡನ್ ತಿಮಿಳು ಚಿತ್ರದ ಜಾಹೀರಾತು , * ಪಂಡಿತ ಡಿ. ಗೋಪಾಲಾಚಾರ್ಲುರವರ "ಅರುಣ" ಗರ್ಭಾಶಯ ಟಾನಿಕ್ ಜಾಹೀರಾತು ... ಹೆಚ್ಚು ವಿವರಗಳಿಲ್ಲ ಆದರೆ ಅದು ಚಂದಮಾಮ ದಲ್ಲಿ . ... ಯಾಕೋ ?? * ಪೂರ್ವ ಪಂಜಾಬಿನ ಸುಂದರವಾದ ಕಾಂಗ್ರಾ ಜಿಲ್ಲೆಯಲ್ಲಿ ಉನ್ನತ ಹಿಮಾಲಯದ ತಪ್ಪಲಲ್ಲಿ ಒಂದು ಪ್ರಶಾಂತ ಸ್ಥಳವಿದೆ - ಇದು ಕೂಲು ಕಣಿವೆ . :) ( ಅವರು ಕುಲು ಕಣಿವೆ ಬಗ್ಗೆ ಹೇಳ್ತಿದಾರೆ ! )
ಕನ್ನಡ ವಿಕಿಪೀಡಿಯಾಗಾಗಿ ಸಂಗೀತಾ ಕಟ್ಟಿ ಅವರ ಬಗ್ಗೆ ಒಂದು ಬರಹವನ್ನ ಕನ್ನಡಿಸಿರುವೆ.
ಎರಡು ಪುಟ್ಟಾತಿಪುಟ್ಟ ಕತೆಗಳು .. ೧) ಜಯಂತ ಕಾಯ್ಕಿಣಿಯವರ ಕತೆಗಳು ನಿಜಕ್ಕೂ ಅದ್ಭುತ ಕತೆಗಳು. ನನ್ನ ಗೆಳೆಯನೊಬ್ಬನಿಗೆ ಅವುಗಳನ್ನು ಕೊಟ್ಟು ಓದಿಸೋಣ ಅಂತ ಆ ಮೂರೂ ಕಥೆ ಪುಸ್ತಕಗಳನ್ನು( ತೂಫಾನ್ ಮೇಲ್ , ಜ.ಕಾ.ಕಥೆಗಳು , ಬಣ್ಣದ ಕಾಲು) ಕೊಂಡು ಅವನ ಮನೆಗೆ ಹೋದೆ . ಅವನಿಗೆ ಕೊಟ್ಟೆ. ಅವನು ಟೇಬಲ್ ಮೇಲೆ ಇಡೋ ಹೊತ್ತಿಗೇ ಅವನ ಮಾವ ಬಂದ್ರು . ನಾನು ಓದ್ತೀನಿ ಅಂತ ತಕೊಂಡೋದ್ರು. ಇದು ಕತೆ ಆಗುತ್ತೋ ಇಲ್ಲವೋ ನೀವೇ ಹೇಳಬೇಕು .. ಗೆಳೆಯರೊಬ್ಬರು ಇದರಲ್ಲಿ ತತ್ವಜ್ಞಾನ ಕಂಡರು ... ನಾನು ರಹಸ್ಯಾತ್ಮಕ ನಿಗೂಢ ಕತೆ ... ಅಂದೆ. ಮುಂದೇನಾಯ್ತು ಅಂತ ಇಲ್ಲ. ಮಾವ ಓದಿದನೋ ? ಮರಳಿ ಕೊಟ್ಟನೋ ? ಇವನು ಓದಿದನೋ? ನಾನು ಕೇಳಿದೆನೆ ? ಇಲ್ಲವೆ? ಎರಡು ಪುಟ್ಟಾತಿಪುಟ್ಟ ಕತೆ ಹೇಳ್ತೀನಂತ ಹೊರಟು ಒಂದೇ ಕತೆ ಹೇಳ್ದೆ ! ವಯಸ್ಸಾದಾಗ ಮನುಷ್ಯನಿಗೆ ಎರಡು ಸಮಸ್ಯೆ ಕಾಡುತ್ವೆ ... ಒಂದೂ ...... ನೆನಪು ಕೈಕೊಡುತ್ತೆ. ಮರೆವಿನ ತೊಂದರೆ ಶುರು‌ಆಗತ್ತೆ ... ಇನ್ನೊಂದೂ .... .... ... ನಾನು ಏನ್ ಹೇಳ್ತಾ ಇದ್ದೆ ?
http://kn.wikipedia.org/wiki/ಕೆಂಗಲ್_ಹನುಮಂತಯ್ಯ ಅನುವಾದ ಸಂಪೂರ್ಣ http://kn.wikipedia.org/wiki/ಮರಾಠ_ಸಾಮ್ರಾಜ್ಯ ಕೂಡ ಅರ್ಧ ಆಗಿದೆ
ಕೊಲೆಗಾರರು ಯಾರು ? ಒಂದು ಹಾಸ್ಯ ಲೇಖನ ಸಂಪದದಲ್ಲಿ ’ ಕೊಲೆಗಾರರು ಯಾರು ? ’ ಬರಹ ಓದುತ್ತಿದ್ದಂತೆ ನಾನು ಹಿಂದೊಮ್ಮೆ ಸುಧಾದಲ್ಲಿ ಓದಿದ ಹಾಸ್ಯ ಬರಹ ನೆನಪಾಯಿತು . ಅದು ಯಾರು ಬರೆದಿದ್ದದ್ದು ನೆನಪಿಲ್ಲ ; ವಿಷಯ ಮುಖ್ಯ ತಾನೆ ? ಓದಿ ಸಂತಸ ಪಡಿ . ಒಬ್ಬ ಪತ್ತೇದಾರಿ ಸಾಹಿತ್ಯದ ಓದಿನ ಗೀಳಿನ ಮನುಷ್ಯ ಇರ್ತಾನೆ . ಅವನಿಗೆ ಒಂದ್ಸಲ ಓದಕ್ಕೆ ಏನೂ ಇಲ್ದೆ ತನ್ನ ಗೆಳೆಯನ ಹತ್ರ ಹೋಗಿ ಓದಕ್ಕೆ ಏನಾದ್ರೂ ಕೊಡೋ ಅಂತ ಕೇಳಿದಾಗ ಅವನು ಕೈಗೆ ಸಿಕ್ಕ ಪುಸ್ತಕಾನ ಕೊಟ್ಟು ಕಳಿಸ್ತಾನೆ . ಅದು ಷೇಕ್ಸಪಿಯರನ ಮ್ಯಾಕ್‍ಬೆತ್ ನಾಟಕದ ಅನುವಾದ . ಡಿ. ವಿ. ಜಿ ಅವರದ್ದು , ಹಳೆಗನ್ನಡ ಶೈಲಿಯಲ್ಲಿದೆ . ಮರುದಿನ ಅವನು ಬಂದು ಪುಸ್ತಕ ವಾಪಸ್ ಕೊಡ್ತಾ ಹೇಳ್ತಾನೆ ... ನಂಗೆ ಮ್ಯಾಕ್‍ಬೆತ್ ಮಾಡಿದ್ದು ಅನ್ನಿಸ್ಲಿಲ್ಲ . ’ಏನೋ?’ ’ಅದೇ ಮರ್ಡರು ’ ’ಯಾಕೋ’ ಈಗ ಅವರ ನಡುವೆ ಚರ್ಚೆ . ನಾನಾ ಥಿಯರಿಗಳು . ಆ ನಾಟಕದಲ್ಲಿ ಆಗಿರೋ ಕೊಲೇನ ಯಾರು ಮಾಡಿದ್ದು ? ಅಂತ ! --ಕ್ಲಿಯರ್ ಆಗೇ ಇದೆಯಲ್ಲೋ ? ಮ್ಯಾಕ್‍ಬೆತ್ ಮಾಡಿದ್ದು ಅಂತ ? -- ಅದ್ಯಾವ ಸೀಮೆ ಪತ್ತೇದಾರಿನೋ ? ಮೊದಲ ನೋಟಕ್ಕೆ ಕೊಲೆಗಾರ ಅನ್ನಿಸಿದೋನು ಕೊಲೆ ಮಾಡಿರೋದಿಲ್ಲ , ಇಷ್ಟೂ ಗೊತ್ತಿಲ್ವೇ ನಿಂಗೆ ? --ನಾಯಕಿ ಇರ್ತಾಳಲ್ಲ ? ಅವಳೇ ಇರಬೇಕು . ಮೇಣದ ಬತ್ತಿ ಹಿಡಿದು ಸಂಶಯಾಸ್ಪದ ಆಗಿ ರಾತ್ರಿ ಹೊತ್ತು ಓಡಾಡ್ತ ಇರ್ತಾಳಲ್ಲ ? ಒಂದು ವೇಳೆ ಅವಳಲ್ಲದಿದ್ರೆ ...
ಬರವಣಿಗೆಯ ಕನ್ನಡದ ದಿಕ್ಕು ಕನ್ನಡದಲ್ಲಿ ಸಂಸ್ಕೃತದ ಅತಿಬಳಕೆಯಿಂದ , ಸಂಸ್ಕೃತದ ಕಾಗುಣಿತ(ಸ್ಪೆಲ್ಲಿಂಗ್ಸ್ ) ನಿಂದಾಗಿ ಹಳ್ಳಿಗರಿಗೆ ಮತ್ತು ಸಂಸ್ಕೃತದ ಪರಿಚಯ ಇಲ್ಲದವರಿಗೆ ( ಅಂದರೆ ’ಕೆಳ’ ಎಂದು ತಿಳಿದಿರುವ ಜಾತಿಯ ಜನಕ್ಕೆ) ತೊಂದರೆ ಆಗಿದೆಯಂತೆ . ಅದಕ್ಕಾಗಿ ಮಹಾಪ್ರಾಣ , ಷ ಇತ್ಯಾದಿ ಅಕ್ಷರಗಳನ್ನು ತೆಗೆದು ಹಾಕಿ ಎಂಬ ವಾದ ಒಂದೆಡೆ ಎದ್ದಿದೆ . ( ಅಂದ ಹಾಗೆ ಚಾಯನೀಸ್ ಭಾಶೆಯಲ್ಲಿ ಸಾವಿರಾರು ಅಕ್ಶರಗಳಂತೆ ; ಅವರಿಗೆ ಏನು ತೊಂದರೆ / ಎಷ್ಟು ತೊಂದರೆ ಆಗಿದೆಯೋ ಏನೋ ; ಅವರು ಬಳಸ್ತಾ ಇಲ್ವೀ ; ನೂರಾರು ವರುಷ ಅದು ಬಾಳಿ ಬದುಕಿಲ್ವೇ? -- ನನಗೆ ಸರಿಯಾಗಿ ಗೊತ್ತಿಲ್ಲ) ಸರಿ ಈ ವಾದಾನೂ ಒಪ್ಕೊಳ್ಳೋಣ ; ಶಂಕರ ಭಟ್ಟರ ವಾದಾನೂ ಒಂತರ ಸರೀನೇ ; ಭಾಶೆಯ ಕಠಿಣತನವನ್ನು ಕಡಿಮೆ ಮಾಡಿ , ಪರಸ್ಪರ ಓದಿ , ಬರೆಯಲು , ಹೆಚ್ಚಿನ ತಿಳಿವು ಪಡೆದು , ಬದುಕನ್ನು ಶ್ರೀಮಂತಗೊಳಿಸಲು ಸರಳಗೊಳಿಸೋಣ ; ಅದಕ್ಕೆ ನನ್ನ ಒಪ್ಪಿಗೆಯೂ ಇದೆ ; ಆದರೆ ಈಗಾಗಲೇ ಬಳಕೆಯಲ್ಲಿರೋ ಎಲ್ಲಾ ಸಂಸ್ಕೃತ ಶಬ್ದಗಳನ್ನ ಬದಲಿಸಲೇಬೇಕೆಂಬ ಹಟ ಏಕೆ ? ಎಲ್ರಿಗೂ ತಿಳಿಯೋ ಕನ್ನಡ ಶಬ್ದ ಇದ್ರೆ ಸರಿ , ಅದನ್ನು ಸಂಸ್ಕ್ರುತ ಶಬ್ದಕ್ಕೆ ಬದಲಾಗಿ ಬಳಸೋಣ ; ಸಂಸ್ಕೃತದ ಮೇಲಿನ ದ್ವೇಶದಿಂದ ಎಲ್ಲರಿಗೂ ತಿಳಿಯೋ ಶಬ್ದಗಳನ್ನು , ಅವು ಸಂಸ್ಕ್ರುತ ಎಂಬ ಒಂದೇ ಕಾರಣಕ್ಕೆ , ಅದಕ್ಕೆ ಬದಲಿಯಾಗಿ ಯಾರಿಗೂ ಗೊತ್ತಿಲ್ಲದ ಶಬ್ದಗಳನ್ನು ಹೆಕ್ಕಿ ತೆಗೆಯೋದು ಏಕೆ ? ದಿನ , ವರ್ಷ ಎಲ್ರಿಗೂ...